News Karnataka Kannada
Monday, May 06 2024
ಮಡಿಕೇರಿ

ಮಡಿಕೇರಿ: ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇಗೆ ಕಾವೇರಿ ಎಂದು ಹೆಸರಿಡಲು ಪ್ರತಾಪ್ ಸಿಂಹ ಮನವಿ

Pratap Simha has requested to rename the Mysuru-Bengaluru Expressway after Cauvery.
Photo Credit : By Author

ಮಡಿಕೇರಿ: ಮುಕ್ತಾಯದ ಹಂತದಲ್ಲಿರುವ ಮೈಸೂರು ಬೆಂಗಳೂರು ನಡುವಿನ 119 ಕಿಲೋಮೀಟರ್ ಅಂತರದ ದಶಪಥ ಎಕ್ಸ್ ಪ್ರೆಸ್ ಹೆದ್ದಾರಿಗೆ ಕಾವೇರಿ ಹೆಸರನ್ನು ಇಟ್ಟು ಕಾವೇರಿ ಎಕ್ಸ್ ಪ್ರೆಸ್ ವೆ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು.

ಕೊಡಗಿನ ತಲಕಾವೇರಿಯಲ್ಲಿ ಜನಿಸಿ ಕರ್ನಾಟಕದ ಜೀವನದಿ ಎನಿಸಿರುವ ಕಾವೇರಿ ಯೊಂದಿಗೆ ಕೊಡಗು ಮೈಸೂರು ಮಂಡ್ಯ ಮತ್ತು ಬೆಂಗಳೂರು ಜನತೆಗೆ ಭಾವನಾತ್ಮಕ ಸಂಬಂಧವಿದೆ . ಪಶ್ಚಿಮ ಘಟ್ಟದಲ್ಲಿ ಉಗಮಿಸುವ ಕಾವೇರಿ ಎಂಬ ಪವಿತ್ರ ಹೆಸರನ್ನೇ ಎಕ್ಸ್ ಪ್ರೆಸ್ ಹೆದ್ದಾರಿಗೆ ಇಡುವುದು ಅತ್ಯಂತ ಸೂಕ್ತ ಎಂದು ಪ್ರತಾಪ್ ಸಿಂಹ ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಕಾವೇರಿ ಎಕ್ಸ್ ಪ್ರೆಸ್ ವೇ ಹೆಸರಿಗೆ ಸಚಿವ ನಿತಿನ್ ಗಡ್ಕರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು