News Karnataka Kannada
Friday, May 03 2024
ಮಡಿಕೇರಿ

ಮಡಿಕೇರಿ: ಮಕ್ಕಳನ್ನು ಸಮಾಜಕ್ಕೆ ಮಾದರಿಯಾಗುವಂತೆ ಬೆಳಸಿ- ರಾಜ್ ಕುಶಾಲಪ್ಪ

Koorgu
Photo Credit : By Author

ಮಡಿಕೇರಿ: ಹುದಿಕೇರಿ ಲಿಟಲ್ ಫ್ಲವರ್ ಹಿರಿಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಕಿರಿಯಮಾಡ ರಾಜ್ ಕುಶಾಲಪ್ಪ ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಮಾನವೀಯತೆಯ ಗುಣಗಳನ್ನು ಕಲಿಸಿ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಿಸಿ ಸಮಾಜಕ್ಕೆ ಹೊರೆಯಾಗದಂತೆ ಮಾಡುವುದು ಪೋಷಕರ ಮುಖ್ಯ ಜವಾಬ್ದಾರಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪ ತಹಶಿಲ್ದಾರ್ ಸ್ವಾತಿ ಮಾತನಾಡಿ ಶಿಕ್ಷಣವು ವ್ಯಾಪರಿಕರಣವಾಗದೆ ಈ ಭಾಗದ ಜನರಿಗೆ ಲಿಟಲ್ ಫ್ಲವರ್ ಶಾಲೆ ಸಲ್ಲಿಸುತ್ತಿರುವ ಸೇವೆ ಪ್ರಶಂಸಿಸಿದರು. ಶ್ರೀಮಂಗಲ ಆರಕ್ಷಕ ಠಾಣೆಯ ಸಹಾಯಕ ಉಪನಿರೀಕ್ಷಕ ಸಾಲ್ಡಾನ ಉಪಸ್ಥಿತರಿದ್ದು ಮಾತನಾಡಿದರು .

ಕಾರ್ಯಕ್ರಮ ದಲ್ಲಿ ಶಾಲೆಯ ಆಡಳಿತ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ಆಶಾ ಸತೀಶ್. ಮೈಸೂರು ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಸ್ಥ ನಾಗೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ ಬಿ.ಎನ್.ಫೂವಯ್ಯರವರನ್ನು ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು