ಮಡಿಕೇರಿ: ಹುದಿಕೇರಿ ಲಿಟಲ್ ಫ್ಲವರ್ ಹಿರಿಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಕಿರಿಯಮಾಡ ರಾಜ್ ಕುಶಾಲಪ್ಪ ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಮಾನವೀಯತೆಯ ಗುಣಗಳನ್ನು ಕಲಿಸಿ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಿಸಿ ಸಮಾಜಕ್ಕೆ ಹೊರೆಯಾಗದಂತೆ ಮಾಡುವುದು ಪೋಷಕರ ಮುಖ್ಯ ಜವಾಬ್ದಾರಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ತಹಶಿಲ್ದಾರ್ ಸ್ವಾತಿ ಮಾತನಾಡಿ ಶಿಕ್ಷಣವು ವ್ಯಾಪರಿಕರಣವಾಗದೆ ಈ ಭಾಗದ ಜನರಿಗೆ ಲಿಟಲ್ ಫ್ಲವರ್ ಶಾಲೆ ಸಲ್ಲಿಸುತ್ತಿರುವ ಸೇವೆ ಪ್ರಶಂಸಿಸಿದರು. ಶ್ರೀಮಂಗಲ ಆರಕ್ಷಕ ಠಾಣೆಯ ಸಹಾಯಕ ಉಪನಿರೀಕ್ಷಕ ಸಾಲ್ಡಾನ ಉಪಸ್ಥಿತರಿದ್ದು ಮಾತನಾಡಿದರು .
ಕಾರ್ಯಕ್ರಮ ದಲ್ಲಿ ಶಾಲೆಯ ಆಡಳಿತ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ಆಶಾ ಸತೀಶ್. ಮೈಸೂರು ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಸ್ಥ ನಾಗೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ ಬಿ.ಎನ್.ಫೂವಯ್ಯರವರನ್ನು ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.