ಮಡಿಕೇರಿ

ಮಡಿಕೇರಿ| ಕೂಟುಹೊಳೆಯಿಂದ ರಸ್ತೆ ಮುಳುಗಡೆ : ಹೆಚ್ಚುವರಿ ಹಲಗೆ ತೆರವಿಗೆ ಗ್ರಾಮಸ್ಥರ ಒತ್ತಾಯ

ಮಡಿಕೇರಿ: ನಗರಕ್ಕೆ ಕುಡಿಯುವ ನೀರು ಒದಗಿಸುವ ಕೂಟುಹೊಳೆಯ ಹೆಚ್ಚುವರಿ ಹಲಗೆಗಳನ್ನು ತೆರವುಗೊಳಿಸದೆ ಇರುವುದರಿಂದ ಸುತ್ತಮುತ್ತಲ ಗ್ರಾಮಗಳಿಗೆ ಸಂಕಷ್ಟ ಎದುರಾಗಿದೆ. ಧಾರಾಕಾರ ಮಳೆಯಿಂದ ರಸ್ತೆ ಮತ್ತು ಗದ್ದೆಗಳು ಮುಳುಗಡೆಯಾಗಿದ್ದು, ಗಾಳಿಬೀಡು ಗ್ರಾಮದ ಮನೆಗಳು ಅಪಾಯನ್ನು ಎದುರಿಸುತ್ತಿವೆ.

ಈ ಕುರಿತು ಜಿಲ್ಲಾಡಳಿತ ಮತ್ತು ಮಡಿಕೇರಿ ನಗರಸಭೆಗೆ ಮನವಿ ಪತ್ರ ಸಲ್ಲಿಸಿರುವ ಗಾಳಿಬೀಡು ಸ್ನೇಹಿತರ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಕೂಟುಹೊಳೆಯ ಹಿನ್ನೀರು ಆತಂಕವನ್ನು ಸೃಷ್ಟಿಸಿರುವ ಬಗ್ಗೆ ವಿವರಿಸಿದರು.

ಮಡಿಕೇರಿ ತಾಲ್ಲೂಕು ಕೆ.ನಿಡುಗಣೆ ಗ್ರಾಮ ಹಾಗೂ ಗಾಳಿಬೀಡು ಸರಹದ್ದಿನಲ್ಲಿರುವ ಕೂಟುಹೊಳೆ ಅಣೆಕಟ್ಟಿನ ಮೂಲಕ ನೀರನ್ನು ಸಂಗ್ರಹಿಸಿ ಮಡಿಕೇರಿ ನಗರಕ್ಕೆ ನೀರನ್ನು ಒದಗಿಸಲಾಗುತ್ತಿದೆ. ಗಾಳಿಬೀಡು, ಮೊಣ್ಣಂಗೇರಿಯಿಂದ ಕೂಟುಹೊಳೆ ಅಣೆಕಟ್ಟಿಗೆ ಸಂಪೂರ್ಣ ನೀರಿನ ಒಳಹರಿವು ಇದ್ದು, ಈ ಹೊಳೆಯು ಗಾಳಿಬೀಡು ಮುಖ್ಯರಸ್ತೆಯ ಸನಿಹದಲ್ಲಿ ಹರಿದು ಹೋಗುತ್ತದೆ. ಕೂಟುಹೊಳೆಯ ಅಸುಪಾಸಿನಲ್ಲಿ ಮನೆ ಮತ್ತು ಕೃಷಿ ಗದ್ದೆಗಳಿವೆ.

ಅಣೆಕಟ್ಟಿನ ಮೇಲೆ ತಾತ್ಕಾಲಿಕವಾಗಿ ಹಲಗೆಗಳನ್ನು ಅಳವಡಿಸಿ ಹೆಚ್ಚುವರಿ ನೀರನ್ನು ಸಂಗ್ರಹಿಸಲಾಗುತ್ತದೆ. ಹೆಚ್ಚುವರಿ ನೀರು ಸಂಗ್ರಹಣೆಗಾಗಿ ಅಳವಡಿಸಲಾಗಿರುವ ಹಲಗೆಗಳನ್ನು ಮಳೆಗಾಲದಲ್ಲಿ ತೆರವುಗೊಳಿಸುವುದು ವಾಡಿಕೆ. ಆದರೆ 2018 ರ ನಂತರ ಇಲ್ಲಿಯವರೆಗೆ ಹಲೆಗಳನ್ನು ತೆರವುಗೊಳಿಸಿಲ್ಲ. ಪ್ರಸ್ತುತ ಈ ಭಾಗದಲ್ಲಿ 60 ಇಂಚಿಗೂ ಹೆಚ್ಚು ಮಳೆಯಾಗಿದ್ದು, ಕೂಟುಹೊಳೆ ಹಿನ್ನೀರಿನಿಂದ ರಸ್ತೆ ಮತ್ತು ಗದ್ದೆಗಳು ಮುಳುಗಡೆಯಾಗಿರುವುದಲ್ಲದೆ ಮನೆಗಳು ಅಪಾಯವನ್ನು ಎದುರಿಸುತ್ತಿವೆ ಎಂದು ಗಮನ ಸೆಳೆದರು.

ಪ್ರತಿ ವರ್ಷ ನಗರಸಭೆಯ ಗಮನಕ್ಕೆ ತಂದು ಹಲಗೆ ತೆರವಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ಮುಂದಿನ ಎರಡು ತಿಂಗಳುಗಳ ಕಾಲ ಅತಿ ಹೆಚ್ಚು ಮಳೆಯಾಗುವುದರಿಂದ ಕೂಟುಹೊಳೆ ಅಣೆಕಟ್ಟಿಗೆ ಹೆಚ್ಚಿನ ಒಳಹರಿವು ಬಂದು ಅಪಾಯ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ರಸ್ತೆಗಳು ಮುಳುಗಡೆಯಾಗುವುದರಿಂದ ಸಂಪರ್ಕ ಕಡಿತಗೊಂಡು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ಗದ್ದೆಗಳು ಜಲಾವೃತವಾದರೆ ಕೃಷಿ ಕಾರ್ಯವನ್ನು ಕೈಬಿಡಬೇಕಾಗುತ್ತದೆ. ಆದ್ದರಿಂದ ಹೆಚ್ಚುವರಲಿ ಹಲಗೆಗಳನ್ನು ತಕ್ಷಣ ತೆರವುಗೊಳಿಸಲು ನಗರಸಭೆ ತುರ್ತು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಸಂಘದ ಪ್ರಮುಖರು ಹಾಗೂ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಈಗಾಗಲೇ ಕುಂಡಾಮೇಸ್ತ್ರಿ ಯೋಜನೆ ಕಾರ್ಯಗತವಾಗಿದ್ದು, ಹೆಚ್ಚುವರಿ ನೀರನ್ನು ತಡೆಹಿಡಿಯುವ ಅಗತ್ಯವಿಲ್ಲವೆಂದು ಅಭಿಪ್ರಾಯಪಟ್ಟರು.

ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ್, ಪದಾಧಿಕಾರಿಗಳಾದ ಕೊಂಬಾರನ ರೋಶನ್ ಗಣಪತಿ, ಕರಕರನ ಪವನ್, ಕೆ.ಬಾಲಕೃಷ್ಣ, ಹೇಮಂತ್ ಕುಮಾರ್, ಕುಶಾನ್, ಸದಾನಂದ, ಮನೋಜ್ ಮತ್ತಿತರರು ನಗರಸಭಾ ಪೌರಾಯುಕ್ತ ರಾಮದಾಸ್ ಹಾಗೂ ಜಿಲ್ಲಾಡಳಿತದ ಅಧಿಕಾರಿ ಪ್ರಕಾಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

18 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

33 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

45 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago