ಮಡಿಕೇರಿ: ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ
ಮಾದಾಪುರದ ಇಗೋಡ್ಲು ಗ್ರಾಮದ ಎಸ್.ಪ್ರೀತಿ ಚಿನ್ನದ ಪದಕ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ. ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯಲ್ಲಿ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈಕೆ ಮಾದಾಪುರದ ಶಿವಜ್ಞಾನಂ ಹಾಗೂ ಜಯಪ್ರಿಯ ದಂಪತಿಗಳ ಪುತ್ರಿ.