ಮಡಿಕೇರಿ ಜೂ.28: ಕೇವಲ ಒಂದೇ ವಾರದಲ್ಲಿ ಕೊಡಗಿನ ವಿವಿಧೆಡೆ ಮೂರು ಬಾರಿ ಭೂಮಿ ಕಂಪಿಸಿದ್ದು, ಹಿರಿಯ ಭೂವಿಜ್ಞಾನಿಗಳು ಜಿಲ್ಲೆಗೆ ಭೇಟಿ ನೀಡಿ ನೈಜಾಂಶ ಬಹಿರಂಗ ಪಡಿಸಬೇಕು ಮತ್ತು ಆತಂಕದಲ್ಲಿರುವ ಜನರಿಗೆ ಅಭಯ ನೀಡಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಪತ್ರಿಕಾ ಹೇಳಿಕೆ ನೀಡಿರುವ ಕೊರವೇ ಅಧ್ಯಕ್ಷ ಪವನ್ ಪೆಮ್ಮಯ್ಯ ನಿರಂತರ ಭೂಕಂಪನದಿಂದ ಕೊಡಗು ಜಿಲ್ಲೆಯ ಜನ ಭಯಗೊಂಡಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ಯಾವುದೇ ಅಪಾಯವಿಲ್ಲ, ಧೈರ್ಯದಿಂದಿರಿ ಎಂದು ಸಮಜಾಯಿಷಿಕೆ ನೀಡುತ್ತಿದ್ದಾರೆ. ಜನರಲ್ಲಿ ಅಡಗಿರುವ ಆತಂಕ ದೂರ ಮಾಡಬೇಕಾದರೆ ಭೂಕಂಪನದ ಸ್ಥಳಗಳಿಗೆ ಹಿರಿಯ ಭೂವಿಜ್ಞಾನಿಗಳು ಭೇಟಿ ನೀಡಿ ವೈಜ್ಞಾನಿಕ ಕಾರಣಗಳನ್ನು ಬಹಿರಂಗ ಪಡಿಸುವುದು ಸೂಕ್ತ ಎಂದು ತಿಳಿಸಿದ್ದಾರೆ.
ಭೂಕಂಪನದ ಕೇಂದ್ರ ಬಿಂದು ಕೊಡಗು ಎಂದು ತಿಳಿದು ಬಂದಿದ್ದು, ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಬೇಕಾಗಿದೆ. ಸತತ ಮೂರು ಬಾರಿ ಭೂಮಿ ಕಂಪಿಸಿರುವುದರಿAದ ಭಾರೀ ಮಳೆಯಾಗುವ ಸಂದರ್ಭ 2018 ರಂತೆ ಅನಾಹುತ ಸಂಭವಿಸುವ ಸಾಧ್ಯತೆಗಳಿದೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಸೂಕ್ಷö್ಮ ಪ್ರದೇಶಗಳ ಮೇಲೆ ನಿಗಾ ವಹಿಸಿ ಭೂವಿಜ್ಞಾನಿಗಳ ಸಲಹೆ ಪಡೆದು ಜನರನ್ನು ರಕ್ಷಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.