ಮಡಿಕೇರಿ, ಸೆ.24: ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ವುಶು ದಸರಾ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪಿ.ಬಿ.ಧನುಷ್, ಎ.ಎಸ್.ಸುದರ್ಶನ್ ಬೆಳ್ಳಿಪದಕವನ್ನು ಗೆದ್ದುಕೊಂಡಿದ್ದಾರೆ.
ಇವರು ಸೆ.29 ರಿಂದ ಅ.2ರ ವರೆಗೆ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ಹಾಗೂ ತರಬೇತುದಾರ ಬಿ.ಎ.ಆನಂದ ಪೂಜಾರಿ ಬೆಟ್ಟಗೇರಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು.