ಮಡಿಕೇರಿ: ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಎಂ.ಎಸ್.ಪವನ್, ಪಿ.ಎಸ್.ಜೀವ, ಬಿ.ಪಿ.ಗೌರವ್ ಬೆಳ್ಳಿಪದಕವನ್ನು ಗೆದ್ದುಕೊಂಡಿದ್ದಾರೆ.ಸೆ.೨೯ ರಿಂದ ಅ.೨ರ ವರೆಗೆ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಲಿದೆ.
ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ಹಾಗೂ ತರಬೇತುದಾರ ಬಿ.ಎ.ಆನಂದ ಪೂಜಾರಿ ಬೆಟ್ಟಗೇರಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು.