Categories: ಮಡಿಕೇರಿ

ಮಡಿಕೇರಿ: ಜ.6, 7, 8 ರಂದು ಹಾವೇರಿಯಲ್ಲಿ ನಡೆಯಲಿದೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಮಡಿಕೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7, 8 ರಂದು ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಸಾಧಕರನ್ನು ಸನ್ಮಾನಿಸುವ, ಸಾಹಿತಿಗಳಿಗೆ ಕವನ ವಾಚನ ಮತ್ತು ವಿಷಯ ಮಂಡನೆಗೆ ಅವಕಾಶ ನೀಡಲಾಗಿದೆ.

ದಿನಾಂಕ 6/1/2023 ರ ಶುಕ್ರವಾರ ಸಂಜೆ 6.00 ಗಂಟೆಗೆ ನಡೆಯಲಿರುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪುತ್ರರಾದ ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರಿಯಪ್ಪ ಅವರಿಗೆ ರಕ್ಷಣಾ ಕ್ಷೇತ್ರದಲ್ಲಿ ದೇಶ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಸನ್ಮಾನ ನಡೆಯಲಿದೆ.

ಇದು ಕೊಡಗು ಜಿಲ್ಲೆಗೆ ಮತ್ತು ಕೊಡಗಿನ ರಕ್ಷಣಾ ಕ್ಷೇತ್ರದ ಸೇವೆಗೆ ನೀಡಿದ ಗೌರವವಾಗಿದೆ. ದಿನಾಂಕ 08.01.2023ರ ಭಾನುವಾರ ಮಧ್ಯಾಹ್ನ 3:00ಗೆ ನಡೆಯಲಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕೊಡಗಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ, 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ ಸಾಹಿತ್ಯ ಸಂಘಟಕ ಟಿ.ಪಿ ರಮೇಶ್ ರವರನ್ನು ಸನ್ಮಾನಿಸಲಾಗುವುದು.

ದಿನಾಂಕ 06.01. 2023ರ ಭಾನುವಾರ 4 ಗಂಟೆಗೆ ಜರಗುವ ಕವಿಗೋಷ್ಠಿಯಲ್ಲಿ ಕೊಡಗಿನ ಹಿರಿಯ ಚುಟುಕು ಕವಿ ಹಾ.ತಿ ಜಯಪ್ರಕಾಶ್ ರವರು ಕವನ ವಾಚನ ಮಾಡಲಿದ್ದಾರೆ.

ದಿನಾಂಕ : 07.01.2023 ರ ಶನಿವಾರ ಮದ್ಯಾಹ್ನ 3.00 ಗಂಟೆಗೆ ನಡೆಯುವ “ಶಿಕ್ಷಣದಲ್ಲಿ ಕನ್ನಡ ಅಸ್ಮಿತೆ” ಎಂಬ ವಿಚಾರ ಗೋಷ್ಠಿಯಲ್ಲಿ ಕೊಡಗಿನವರಾದ, ಇದೀಗ ಹಂಪಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರಾಧ್ಯಾಪಕರಾದ ಡಾ ಮಾಧವ ಪೆರಾಜೆ ( ಇವರು ದಿ. ಕೇಶವ ಪೆರಾಜೆ ಅವರ ಸಹೋದರರು) ಅವರು ಆಶಯ ಭಾಷಣ ಮಾಡಲಿದ್ದಾರೆ.

ದಿನಾಂಕ 07.01.2023ರ ಶನಿವಾರ ಕರ್ನಾಟಕ ಭಾಷಾ ವೈವಿಧ್ಯ ಕುರಿತು ನಡೆಯುವ ವಿಚಾರಗೋಷ್ಠಿಯಲ್ಲಿ ಕೊಡವ ಭಾಷಾ ವೈವಿಧ್ಯ ಕುರಿತು ಮಡಿಕೇರಿಯ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಡಾ. ಕಾವೇರಿ ಎನ್ ಎ ಉಪನ್ಯಾಸ ನೀಡಲಿದ್ದಾರೆ. ಅದೇ ವೇದಿಕೆಯಲ್ಲಿ ಅರೆ ಭಾಷೆ ವೈವಿಧ್ಯತೆಯ ಕುರಿತು ಜಿಲ್ಲೆಯ ಸಾಹಿತಿ ಶ್ರೀಮತಿ ಸ್ಮಿತಾ ಅಮೃತರಾಜ್ ರವರು ಉಪನ್ಯಾಸ ನೀಡಲಿದ್ದಾರೆ.

ದಿನಾಂಕ. 08.01.2023 ಭಾನುವಾರ ವರ್ತಮಾನದಲ್ಲಿ ಮಹಿಳೆ ಗೋಷ್ಠಿಯಲ್ಲಿ ಔದ್ಯೋಗಿಕ ಮಹಿಳೆಯರ ಸಾಧನೆಗಳು ಎಂಬ ವಿಚಾರದ ಕುರಿತು ಜಿಲ್ಲೆಯ ಉದ್ಯಮಿ ಜೇನು ಕೃಷಿ ಮತ್ತು ಮಾರುಕಟ್ಟೆಯಲ್ಲಿ ಅಪ್ರತಿಮ ಸಾಧನೆ ಸಾಧಿಸಿದ ಶ್ರೀಮತಿ ಛಾಯಾ ನಂಜಪ್ಪ ರವರು ವಿಷಯ ಮಂಡನೆ ಮಾಡಲಿದ್ದಾರೆ.

ಈ ಬಾರಿ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಏಳು ಜನರಿಗೆ ಅವಕಾಶ ದೊರೆತಿದ್ದು ಇದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂದ ಗೌರವವಾಗಿದೆ. ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಕಾರ್ಯಕ್ರಮದಲ್ಲಿ ಸ್ವಾಗತ ಜವಾಬ್ದಾರಿ ನಿರ್ವಹಿಸಲಿದ್ದು ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ ರಾಜೇಶ್ ಪದ್ಮನಾಭ ರವರು ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ.

ಜಿಲ್ಲೆಯಿಂದ ನೂರಕ್ಕೂ ಹೆಚ್ಚು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರುಗಳು ಮತ್ತು ಕನ್ನಡ ಅಭಿಮಾನಿಗಳು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

1 hour ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago