ಮಡಿಕೇರಿ: ಜಿಲ್ಲಾಧಿಕಾರಿಗಳ ಕಚೇರಿ ತಡೆಗೋಡೆ ಕಾಮಗಾರಿ ಕಳಪೆಯಾಗಿರುವ ಬಗ್ಗೆ ತನಿಖೆಗೆ ಆಗ್ರಹಿಸಿ ತೆನ್ನಿರ ಮೈನಾರವರು ತನಿಖಾ ಸಂಸ್ಥೆಗಳಲ್ಲಿ ದೂರು ದಾಖಲಿಸಿದ್ದು ಇದಕ್ಕೆ ಪ್ರತಿಯಾಗಿ ಅಧಿಕಾರಿಯೊಬ್ಬರು ತಮ್ಮ ಕುಟುಂಬ ಸದಸ್ಯರಿಂದ ಮೈನಾ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.
ತೆನ್ನಿರ ಮೈನಾ ಪರ ವಾದಿಸಿದ್ದ ಹೈಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಅವರ ವಾದವನ್ನು ಆಲಿಸಿದ ನ್ಯಾಯಾಲಯ ಮೇಲ್ನೋಟಕ್ಕೆ ಇದೊಂದು ದುರುದ್ದೇಶದಿಂದ ಕೂಡಿದ ಪ್ರಕರಣ ಎಂದು ಪರಿಗಣಿಸಿ ತಡಯಾಜ್ಞೆ ನೀಡಿದೆ.