Categories: ಮಡಿಕೇರಿ

ಮಡಿಕೇರಿ: ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ದೇವರ ರಥೋತ್ಸವ

ಕುಶಾಲನಗರ: ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣ, ಆಗಾಗ್ಗೆ ತಂಪೆರೆಯುತ್ತಿದ್ದ ತುಂತುರು ಮಳೆ, ಅಯ್ಯಪ್ಪ ವೃತಧಾರಿಗಳ ಜಯಘೋಷ, ಭಕ್ತರ ಉತ್ಸಾಹದ ಮಧ್ಯೆ ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ದೇವರ ರಥೋತ್ಸವ ಶನಿವಾರ ಶ್ರದ್ಧಾ ಭಕ್ತಿಯ ಜೊತೆಗೆ ವಿಜೃಂಭಣೆಯಿಂದ ನಡೆಯಿತು.

ಕೊರೊನಾ ಕಾರಣಕ್ಕೆ ಕಳೆದ 2 ವರ್ಷ ಸರಳವಾಗಿ ಆಚರಿಸಿದ್ದ ಉತ್ಸವ ಈ ಬಾರಿ ಕಳೆಗಟ್ಟಿತ್ತು. ರಥೋತ್ಸವ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. 11.30ರ ಸುಮಾರಿಗೆ ರಥಕ್ಕೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು.

ನಂತರ ದೇವಾಲಯದಲ್ಲಿ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿ ದೇವರ ಉತ್ಸವಮೂರ್ತಿಯನ್ನು ಮಂಗಳವಾದ್ಯಗಳ ಜೊತೆಗೆ ದೇವಾಲಯದಿಂದ ಹೊರತಂದು ಭಕ್ತರ ಜಯಘೋಷಗಳ ಮಧ್ಯೆ ರಥದಲ್ಲಿ ಕುಳ್ಳರಿಸಲಾಯಿತು. ಇದಕ್ಕೂ ಮೊದಲು ಪಕ್ಕದ ಹೆಬ್ಬಾಲೆ ಮತ್ತು ಆವರ್ತಿಯಿಂದ ಬಂದಿದ್ದ ಗೋವುಗಳಿಗೆ ಗೋಪೂಜೆ ನೆರವೇರಿಸಲಾಯಿತು.

ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು ಗಣಪತಿ ದೇವಾಲಯದ ಎದುರು ರಸ್ತೆಯುದ್ದಕ್ಕೂ ಕರ್ಪೂರ ಹರಡಿ ಬೆಂಕಿ ಹಚ್ಚಿ ಪ್ರಾರ್ಥನೆ ಸಲ್ಲಿಸಿದರು. ಮಾಲಾಧಾರಿಗಳ ಲಯಬದ್ಧ ಭಜನೆ ಈ ಸಂದರ್ಭದಲ್ಲಿ ಗಮನ ಸೆಳೆಯಿತು. ಮತ್ತೊಂದು ಕಡೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥದ ಮುಂದೆ ಹಣ್ಣುಕಾಯಿ ಮಾಡಿಸಲು ಮುಗಿಬಿದ್ದರು. ಅರ್ಚಕರು ತಾಳ್ಮೆಯಿಂದಲೇ ಭಕ್ತರು ತಂದಿದ್ದ ಹಣ್ಣುಕಾಯಿ ಸ್ವೀಕರಿಸಿ, ದೇವರಿಗೆ ಸಮರ್ಪಿಸಿ ಭಕ್ತರಿಗೆ ಹಿಂತಿರುಗಿಸುತ್ತಿದ್ದ ದೃಶ್ಯ ಕಂಡುಬಂತು.

ಮಧ್ಯಾಹ್ನ 1.15ರ ಸುಮಾರಿಗೆ ರಥೋತ್ಸವಕ್ಕೆ ಚಾಲನೆ ದೊರೆಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಸೇರಿದ್ದ ಭಕ್ತರು ಗಣಪತಿಗೆ ಜಯಘೋಷ ಮೊಳಗಿಸುತ್ತಾ ಉತ್ಸಾಹದಿಂದ ರಥ ಎಳೆದು ಪುನೀತರಾದರು. ಹರಕೆ ಹೊತ್ತಿದ್ದ ಭಕ್ತರು ರಥ ಆಗಮಿಸುವ ವೇಳೆ ರಸ್ತೆಯಲ್ಲಿ ಸಾವಿರಾರು ಈಡುಕಾಯಿ ಒಡೆದು ಭಕ್ತಿ ಪ್ರದರ್ಶಿಸಿದರು. ದೇವಾಲಯ ವ್ಯಾಪ್ತಿಯಲ್ಲಿ ಬಾಳೆಹಣ್ಣು, ಜವನ ಮಾರಾಟ, ಪೈಪೋಟಿಗೆ ಬಿದ್ದಂತೆ ರಥಕ್ಕೆ ಜವನ ಎಸೆಯುವ ದೃಶ್ಯ ಸಾಮಾನ್ಯವಾಗಿತ್ತು.

ಗಣಪತಿ ದೇವಾಲಯದ ಎದುರಿನ ಫೀಲ್ಡ್ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ರಥಬೀದಿಗಾಗಿ ಆಂಜನೇಯ ದೇವಾಲಯದ ತನಕ ರಥವನ್ನು ಎಳೆದುಕೊಂಡು ಹೋಗಲಾಯಿತು. ಇದಕ್ಕೂ ಮೊದಲು ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ, ಪುಷ್ಪಾಲಂಕಾರ, ರಥಪೂಜೆ ಹಾಗೂ ರಥ ಬಲಿ ಕಾರ್ಯಕ್ರಮಗಳು ನಡೆದವು.

ಗಣಪತಿ ದೇವಾಲಯದ ಪ್ರಧಾನ ಅರ್ಚಕ ಆರ್.ಕೆ. ನಾಗೇಂದ್ರ ಬಾಬು ನೇತೃತ್ವದಲ್ಲಿ ಪೂಜಾ ವಿದಿ ವಿಧಾನಗಳನ್ನು ನೆರವೇರಿಸಲಾಯಿತು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ವಿ.ಎನ್. ವಸಂತ್‌ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಪ್ರಮುಖರು ಇದ್ದರು.

Sneha Gowda

Recent Posts

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

10 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

22 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

33 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

42 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

55 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

1 hour ago