ಮಡಿಕೇರಿ: ಕೇಂದ್ರ ಸರ್ಕಾರ ಗಿರಿಜನರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಮೀಸಲಿಟ್ಟ ಹಣ, ಯೋಜನೆಯ ಜಾಹೀರಾತಿಗಾಗಿ ನೂರಾರು ಕೋಟಿ ರೂಪಾಯಿ ವ್ಯಯವಾದದ್ದು ಹೊರತು ಪಡಿಸಿದರೇ ಗಿರಿಜನರ ಅಭಿವೃದ್ಧಿ ಶೂನ್ಯವಾಗಿದೆ ಎಂದು ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಆರೋಪ ಮಾಡಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮಾನವ ಹಕ್ಕುಗಳಿಗೆ ಬೆಲೆ ಇಲ್ಲದಾಗಿದೆ ಗಿರಿಜನರ ಅಭಿವೃದ್ಧಿಗಾಗಿ ಅನುದಾನ ನೀಡಿಲ್ಲ ಎಂದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಸಂಘಟಕಿ ಡಾ.ಚಮಣ್ ಫರ್ಜಾನ, ಕಾಂಗ್ರೆಸ್ ಪ್ರಮುಖರಾದ ಕುಡಿಯರ ಮುತ್ತಪ್ಪ, ಸರ ಚಂಗಪ್ಪ, ಡಾ.ಹೆಚ್.ಎಂ.ಕಾವೇರಿ ಉಪಸ್ಥಿತರಿದ್ದರು.