News Karnataka Kannada
Monday, April 29 2024
ಮಡಿಕೇರಿ

ಮಡಿಕೇರಿ: ಭೂಕಂಪನ ಹಿನ್ನೆಲೆ ಗಣಿಗಾರಿಕೆ ಸ್ಥಗಿತಕ್ಕೆ ವಿರಾಜಪೇಟೆ ಕಾಂಗ್ರೆಸ್ ಒತ್ತಾಯ

Madikeri: Virajpet Congress demands suspension of mining in wake of earthquake
Photo Credit : By Author

ಮಡಿಕೇರಿ, ಜೂ.28: ಭೂಕಂಪನದ ತೀವ್ರತೆ ಕಂಡು ಬಂದಿರುವ ಕೊಡಗಿನ ಪ್ರದೇಶಗಳಲ್ಲಿ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ವಿರಾಜಪೇಟೆ ಕಾಂಗ್ರೆಸ್ ವಕ್ತಾರ ಪಿ.ಎಲ್.ಸುರೇಶ್ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಿರಂತರ ಭೂಕಂಪನದಿಂದ ಜನರು ಆತಂಕಗೊಂಡಿದ್ದು, ಹಿರಿಯ ಭೂವಿಜ್ಞಾನಗಳ ಭೇಟಿಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಕೊಡಗಿನ ಗಡಿ ಭಾಗವಾದ ಸಂಪಾಜೆ, ಚೆಂಬು, ಪೆರಾಜೆ, ಕರಿಕೆ, ಗಾಳಿಬೀಡು, ಭಾಗಮಂಡಲ ಮತ್ತಿತರ ಭಾಗಗಳಲ್ಲಿ ಕೆಲವು ದಿನಗಳಿಂದ ಭೂಕಂಪನವಾಗುತ್ತಿದೆ. ಇದರಿಂದ ಜನರು ತೀವ್ರ ಆತಂಕಗೊಂಡಿದ್ದಾರೆ. ಗಣಿಗಾರಿಕೆಯಿಂದ ಭೂಕುಸಿತ ಉಂಟಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಈ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು.

ಹಿರಿಯ ಭೂವಿಜ್ಞಾನಿಗಳು ಭೂಕಂಪನ ಸಂಭವಿಸಿದ ಗ್ರಾಮಗಳಿಗೆ ತೆರಳಿ ಜನರಲ್ಲಿ ಧೈರ್ಯ ತುಂಬುವ ಕಾರ್ಯ ಮಾಡಬೇಕೆಂದು ಸುರೇಶ್ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು