ಮಡಿಕೇರಿ: ಚುನಾವಣೆಯ ಸಂದರ್ಭದಲ್ಲಿ ಚಟ್ಟಳ್ಳಿಯ ಅಭ್ಯಾಲ ದಲ್ಲಿ ವಿಶ್ವ ಹಿಂದು ಪರಿಷತ್ನ ಜಿಲ್ಲಾಧ್ಯಕ್ಷ ಹಾಗೂ ವಕೀಲರಾದ ಕೃಷ್ಣಮೂರ್ತಿ ಅವರ ಕಾರಿಗೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಕೃಷ್ಣಮೂರ್ತಿ ಅದೃಷ್ಟವಶಾತ್ ಬಚಾವಾಗಿದ್ದರು. ಈ ಸಂಬಂಧ ಕೃಷ್ಣಮೂರ್ತಿಯವರು ದೂರು ನೀಡಿ ಪ್ರಕರಣ ದಾಖಲಾಗಿತ್ತು.
ಈ ಘಟನೆ ನಡೆದು ಇಂದಿಗೆ ಒಂದೂವರೆ ತಿಂಗಳು ಕಳೆದರೂ ಕೂಡ ಆರೋಪಿಗಳ ಪತ್ತೆ ಆಗಿಲ್ಲ. ಪೊಲೀಸ್ ವರಿಷ್ಠಾಧಿಕಾರಿಗಳು ಯಾಕೆ ಈ ಪ್ರಕರಣದತ್ತ ಹೆಚ್ಚು ಮಹತ್ವ ನೀಡಿಲ್ಲ ಎಂಬುದು ಈಗ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಆರೋಪಿಗಳನ್ನು ಕೂಡಲೇ ಬಂದಿಸುವಂತೆ ಮಡಿಕೇರಿಯ ವಕೀಲರು ಕಲಾಪ ಬಹಿಷ್ಕರಿಸಿ ಮುಷ್ಕರವನ್ನು ಕೂಡ ನಡೆಸಿದ್ದರು. ಆದರೆ ಇದುವರೆಗೂ ಕೂಡ ತನಿಖೆಯ ಪ್ರಗತಿ ಕಾಣದೆ ಇನ್ನೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟವನ್ನು ನಡೆಸಲಾಗುವುದೆಂದು ಜಿಲ್ಲೆಯ ವಿವಿಧ ಸಂಘಟನೆಗಳು ಎಚ್ಚರಿಸಿದ್ದಾರೆ.