ಸೋಮವಾರಪೇಟೆ: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಹಾಗೂ ಅಧಿಕಾರಿಗಳಿಂದ ರೈತರು ಕಿರುಕುಳ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಭ್ರಷ್ಟರ ವರ್ಗಾವಣೆಗೆ ಆಗ್ರಹಿಸಿ ಸೋಮವಾರಪೇಟೆ ತಾಲೂಕು ಕಚೇರಿ ಎದುರು ಸಾಮಾಜಿಕ ಹೋರಾಟಗಾರ ಅನಿಲ್ ಕುಮಾರ್, ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ, ರೈತ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಯಿತು.
ಹಲವು ವರ್ಷಗಳಿಂದ ಕಚೇರಿಯಲ್ಲೆ ಕೊಳೆಯುತ್ತಿರುವ ದುರಸ್ತಿ ಕಡತಗಳನ್ನು ಲಂಚ ಕೊಟ್ಟರೆ ಮಾತ್ರ ವಿಲೇವಾರಿ ಮಾಡುತ್ತಾರೆಂದು ಆರೋಪಿಸಿ ಪ್ರತಿಭಟನೆ ನಡೆಯಿತು.
ಈ ವೇಳೆ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುಬೇಕೆಂದು ಪಟ್ಟು ಹಿಡಿದರು. ತಪ್ಪಿದ್ದಲ್ಲಿ ತಾಲ್ಲೂಕು ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದರು.