News Karnataka Kannada
Sunday, April 28 2024
ಮಡಿಕೇರಿ

ಅಂತರರಾಷ್ಟ್ರೀಯ ಸ್ಮಾರಕವನ್ನು ನಿರ್ಮಿಸುವಲ್ಲಿಯವರೆಗೆ ಶಾಂತಿಯುತ ಹೋರಾಟ: ಎನ್.ಯು.ನಾಚಪ್ಪ

Untitled 1
Photo Credit :

ಮಡಿಕೇರಿ: ಟಿಪ್ಪು ಹಾಗೂ ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯ ಕುತಂತ್ರದಿಂದ 1785ರ ಡಿ.12 ರಂದು ಹತ್ಯೆಗೀಡಾದ ಕೊಡವ ಬುಡಕಟ್ಟು ವೀರರ ನೆನಪಿಗಾಗಿ ಅಂತರರಾಷ್ಟ್ರೀಯ ಸ್ಮಾರಕವನ್ನು ನಿರ್ಮಿಸುವಲ್ಲಿಯವರೆಗೆ ಶಾಂತಿಯುತ ಹೋರಾಟ ಮುಂದುವರೆಯಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಹೇಳಿದ್ದಾರೆ.

ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ವತಿಯಿಂದ ನಡೆದ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಹಿರಿಯರನ್ನು ಕಳೆದುಕೊಂಡ ನೋವು ಇಂದಿಗೂ ಮಾಸಿಲ್ಲ, ಈ ಘೋರ ಘಟನೆ ಕೊಡವ ಬುಡಕಟ್ಟು ಜನಾಂಗದ ಸಂಖ್ಯೆಯನ್ನು ಕ್ಷೀಣಿಸುವಂತೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

32ಕ್ಕೂ ಹೆಚ್ಚು ಬಾರಿ ಟಿಪ್ಪು ಸೇರಿದಂತೆ ನಾಡಿನ ಶತ್ರುಗಳನ್ನು ಹಿಮ್ಮಟ್ಟಿಸಿದ ವೀರ ಕೊಡವರನ್ನು ಸಂಪೂರ್ಣವಾಗಿ ನಾಶ ಮಾಡಲು ಹೂಡಿದ ಸಂಚಿನಿಂದ ಹಿರಿಯರ ಹತ್ಯೆ ನಡೆದಿದೆ. ಈ ದುರಂತ ನರಮೇಧವನ್ನು ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಮತ್ತು ಸಾವಿಗೀಡದವರ ಸ್ಮರಣೆಗಾಗಿ ಸ್ಮಾರಕವನ್ನು ನಿರ್ಮಿಸಬೇಕು. ಇದೇ ಸಂದರ್ಭ ಸಂಘಟನೆಯ ಪ್ರಮುಖರು ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು ಮಂಡಿಸಿದರು.

ಕೊಡವ ಬುಡಕಟ್ಟು ಜನಾಂಗಕ್ಕೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು, ಎಸ್‌ಟಿ ಟ್ಯಾಗ್ ಮೂಲಕ ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು, ಸಂವಿಧಾನದ 25 ಮತ್ತು 26ನೇ ವಿಧಿಗಳಡಿಯಲ್ಲಿ ಕೊಡವ ಬುಡಕಟ್ಟು ಜನಾಂಗದ “ಸಂಸ್ಕಾರ ಗನ್” ಗೆ ಖಾತರಿ ನೀಡಬೇಕು, ಕೊಡವ ಭಾಷೆಯನ್ನು 8ನೇ ಷೆಡ್ಯೂಲ್‌ಗೆ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕೆಂದು ಒತ್ತಾಯಿಸಿದರು.

ಪ್ರಮುಖರಾದ ಕಲಿಯಂಡ ಪ್ರಕಾಶ್, ಅರೆಯಡ ಗಿರೀಶ್, ಮಂದಪಂಡ ಮನೋಜ್, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಚೀಯಬೇರ ಸತೀಶ್ ಹಾಜರಿದ್ದು, ಪುಷ್ಪ ನಮನ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು