ಗೋಣಿಕೊಪ್ಪಲು: ಪೊನ್ನಂಪೇಟೆ ತಾಲೂಕಿನ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕವು ಗೋಣಿಕೊಪ್ಪಲ್ಲಿನಲ್ಲಿ ಜ . 25 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ವಹಿಸಲಿದ್ದು, ಕಾರ್ಯಕ್ರಮವನ್ನು ಗೋಣಿಕೊಪ್ಪಲಿನ ಹಿರಿಯ ಉದ್ಯಮಿ ಕೆ ಅಜಿತ್ ಅಯ್ಯಪ್ಪ ರವರು ಉದ್ಘಾಟಿಸಲಿದ್ದಾರೆ. ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ ಪಿ ಕೇಶವ ಕಾಮತ್ ಬೋಧಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲಿನ ಹಿರಿಯ ವೈದ್ಯರಾದ ಡಾ. ಕೆ ಕೆ ಶಿವಪ್ಪ, ಪೊನ್ನಂಪೇಟೆ ಹೋಬಳಿ ಕಸಾಪದ ಮಾಜಿ ಅಧ್ಯಕ್ಷರಾದ ಡಾ. ಕೆ ಚಂದ್ರಶೇಖರ್ ಮತ್ತು ಬಿ ಎನ್ ಪ್ರಕಾಶ್ ಭಾಗವಹಿಸಲಿದ್ದಾರೆ.
ಪೊನ್ನಂಪೇಟೆ ಹೋಬಳಿಯ ನಿಯೋಜಿತ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ, ಗೌರವ ಕಾರ್ಯದರ್ಶಿಗಳಾಗಿ ಶಿಕ್ಷಕರಾದ ಟಿ ಬಿ ಜೀವನ್ ಮತ್ತೋರ್ವ ಗೌರವ ಕಾರ್ಯದರ್ಶಿಗಳಾಗಿ ಶಿಕ್ಷಕರಾದ ಶ್ರೀಮತಿ ಟಿ.ಕೆ ವಾಮನ ಕೋಶಾಧಿಕಾರಿಗಳಾಗಿ ಎಂ .ಕೆ ಚಂದನ್ ಕಾಮತ್, ಸಂಘಟನಾ ಕಾರ್ಯದರ್ಶಿಯಾಗಿ ಎನ್ ಕೆ. ನಾರಾಯಣಸ್ವಾಮಿ ನಾಯ್ಡು ಜವಾಬ್ದಾರಿ ಸ್ವೀಕರಿಸಲಿದ್ದಾರೆ ಎಂದು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಕೆ.ವಿ ರಾಮಕೃಷ್ಣ ಮತ್ತು ಶೀಲಾ ಬೋಪಣ್ಣ ಜಂಟಿ ಹೇಳಿಕೆಯಲ್ಲಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.