Categories: ಮಡಿಕೇರಿ

ಪೊನ್ನಂಪೇಟೆ: ಜ.25 ರಂದು ಉದ್ಘಾಟನೆಗೊಳ್ಳಲಿದೆ ಕನ್ನಡ ಸಾಹಿತ್ಯ ಪರಿಷತ್ತು ಘಟಕ

ಗೋಣಿಕೊಪ್ಪಲು: ಪೊನ್ನಂಪೇಟೆ ತಾಲೂಕಿನ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕವು ಗೋಣಿಕೊಪ್ಪಲ್ಲಿನಲ್ಲಿ ಜ . 25 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ವಹಿಸಲಿದ್ದು, ಕಾರ್ಯಕ್ರಮವನ್ನು ಗೋಣಿಕೊಪ್ಪಲಿನ ಹಿರಿಯ ಉದ್ಯಮಿ ಕೆ ಅಜಿತ್ ಅಯ್ಯಪ್ಪ ರವರು ಉದ್ಘಾಟಿಸಲಿದ್ದಾರೆ. ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ ಪಿ ಕೇಶವ ಕಾಮತ್ ಬೋಧಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲಿನ ಹಿರಿಯ ವೈದ್ಯರಾದ ಡಾ. ಕೆ ಕೆ ಶಿವಪ್ಪ, ಪೊನ್ನಂಪೇಟೆ ಹೋಬಳಿ ಕಸಾಪದ ಮಾಜಿ ಅಧ್ಯಕ್ಷರಾದ ಡಾ. ಕೆ ಚಂದ್ರಶೇಖರ್ ಮತ್ತು ಬಿ ಎನ್ ಪ್ರಕಾಶ್ ಭಾಗವಹಿಸಲಿದ್ದಾರೆ.

ಪೊನ್ನಂಪೇಟೆ ಹೋಬಳಿಯ ನಿಯೋಜಿತ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ, ಗೌರವ ಕಾರ್ಯದರ್ಶಿಗಳಾಗಿ ಶಿಕ್ಷಕರಾದ ಟಿ ಬಿ ಜೀವನ್ ಮತ್ತೋರ್ವ ಗೌರವ ಕಾರ್ಯದರ್ಶಿಗಳಾಗಿ ಶಿಕ್ಷಕರಾದ ಶ್ರೀಮತಿ ಟಿ.ಕೆ ವಾಮನ ಕೋಶಾಧಿಕಾರಿಗಳಾಗಿ ಎಂ .ಕೆ ಚಂದನ್ ಕಾಮತ್, ಸಂಘಟನಾ ಕಾರ್ಯದರ್ಶಿಯಾಗಿ ಎನ್ ಕೆ. ನಾರಾಯಣಸ್ವಾಮಿ ನಾಯ್ಡು ಜವಾಬ್ದಾರಿ ಸ್ವೀಕರಿಸಲಿದ್ದಾರೆ ಎಂದು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಕೆ.ವಿ ರಾಮಕೃಷ್ಣ ಮತ್ತು ಶೀಲಾ ಬೋಪಣ್ಣ ಜಂಟಿ ಹೇಳಿಕೆಯಲ್ಲಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

35 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

49 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago