ಪೊನ್ನಂಪೇಟೆ: ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಕಳೆದ ಎರಡು ದಶಕಗಳ ಹಿಂದೆ ಸಂಸ್ಥೆಯೊಂದು ವೃತ್ತಾಕಾರದ ಕಟ್ಟೆಯನ್ನು ಕಟ್ಟಿ ಸೂಚನಾ ಫಲಕವನ್ನು ಅಳವಡಿಸಿತ್ತು. ಇದೀಗ ಸೂಚನಾ ಫಲಕ ಹಾಗೂ ಅಲ್ಲಿ ಅಳವಡಿಸಿದ್ದ ವಿದ್ಯುತ್ ದೀಪವು ಕೂಡ ದುರಸ್ತಿಗೀಡಾಗಿವೆ.
ಈ ವೃತ್ತಾಕಾರದ ಕಟ್ಟೆ ಇದೀಗ ವಾಹನ ಸಂಚಾರಕ್ಕೆ ಅಡೆಚೆನೆಯನ್ನು ಉಂಟು ಮಾಡುತ್ತಿದೆ. ಬಸ್ ನಿಲ್ದಾಣದಿಂದ ಬಂದು ಈ ದೇವಸ್ಥಾನ ಸುತ್ತು ಬರುವಾಗ ವಾಹನಗಳ ಒಂದು ಭಾಗ ಈ ಕಟ್ಟೆಗೆ ತಗುಲಿ ವಾಹನಕ್ಕೆ ಹಾನಿ ಉಂಟಾಗುತ್ತಿದೆ. ಒಂದು ಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದರಿಂದ ಸುತ್ತು ಬರುವ ವಾಹನಗಳಿಗೆ ನೇರವಾಗಿ ಹೋಗಲು ಸಾಧ್ಯವಿಲ್ಲದೆ ಟ್ರಾಫಿಕ್ ಜಾಮ್ ಸಮಸ್ಯೆ ಕೂಡ ಎದುರಾಗುತ್ತಿದೆ.ಈ ಕಟ್ಟೆಗೆ ಸವರಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ವೃತ್ತಾಕಾರದ ಕಟ್ಟೆಯಿಂದ ಯಾವುದೇ ಉಪಯೋಗವಿಲ್ಲದರಿಂದ ಕೂಡಲೇ ಗ್ರಾಮ ಪಂಚಾಯಿತಿ ಇದನ್ನು ತೆರವು ಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…