ಮಡಿಕೇರಿ ಜೂ.24 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಹಯೋಗದೊಂದಿಗೆ ಜು.1 ರಂದು ಪತ್ರಿಕಾ ದಿನಾಚರಣೆ ನಡೆಯಲಿದೆ.
ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಬೆಂಗಳೂರಿನ ಹೊಸತು
ಪತ್ರಿಕೆಯ ಸಂಪಾದಕ ಡಾ.ಸಿದ್ಧನ ಗೌಡ ಪಾಟೀಲ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ
ಎಸ್.ಎ.ಮುರಳೀಧರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನ ಕುಮಾರ್, ಕೊಡಗು ಪತ್ರಿಕಾಭವನ ಮ್ಯಾನೆಜಿಂಗ್ ಟ್ರಸ್ಟಿ ಬಿ.ಎನ್.ಮನುಶೆಣೈ, ಮಡಿಕೇರಿ ತಹಶಿಲ್ದಾರ್ ಪಿ.ಎಸ್.ಮಹೇಶ್, ಮುಳಿಯ ಜ್ಯುವೆಲ್ರ್ಸ್ ವ್ಯವಸ್ಥಾಪಕ
ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೆ ಸನ್ಮಾನ ನಡೆಯಲಿದೆ. ಅಲ್ಲದೆ ಕೊಡಗು ಪತ್ರಕರ್ತರ ಸಂಘದ ಗುರುತಿನ ಚೀಟಿಯನ್ನು ಇದೇ ಸಂದರ್ಭ ವಿತರಣೆ ಮಾಡಲಾಗುತ್ತದೆ ಎಂದು
ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಮಾಹಿತಿ ನೀಡಿದ್ದಾರೆ.