ಮಡಿಕೇರಿ ಜು.12: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಆರ್.ಪಿ.ಚಂದ್ರಶೇಖರ್ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಬಿ.ಆರ್.ನಾಯ್ಡು ನೇಮಕ ಮಾಡಿ, ಸಾಮಾಜಿಕ ಜಾಲತಾಣದ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಮಡಿಕೇರಿ ನಗರ ಕಾಂಗ್ರೆಸ್ ಮತ್ತು ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿಯಾಗಿ ಈಗಾಗಲೇ ಚಂದ್ರಶೇಖರ್ ಸೇವೆ ಸಲ್ಲಿಸಿದ್ದಾರೆ.