News Karnataka Kannada
Monday, April 29 2024
ಮಡಿಕೇರಿ

ಮಡಿಕೇರಿಯಲ್ಲಿ ಅಗ್ನಿಪಥ್ ಅಭ್ಯರ್ಥಿಗಳಿಗೆ ಓಟದ ಸ್ಪರ್ಧೆ

Race for Agneepath candidates in Madikeri
Photo Credit : By Author

ಮಡಿಕೇರಿ: ಅಗ್ನಿಪಥ್‌ ಯೋಜನೆಯಡಿ ಸೇನೆಗೆ ಸೇರಲು ಅರ್ಜಿಹಾಕಿರುವ ಅಭ್ಯರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ‘ಅಗ್ನಿವೀರ್ 2022’ ರಸ್ತೆ ಓಟದ ಸ್ಪರ್ಧೆಯನ್ನು ಆಗಸ್ಟ್ 7ರಂದು ಹಮ್ಮಿಕೊಂಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಯುವ ಬಂಟ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ್‌ರೈ ಅವರು, ಮಡಿಕೇರಿ ಹೊರವಲಯದ ಕ್ಲಬ್ ಮಹೀಂದ್ರ ಬಳಿಯಿಂದ ಆರಂಭವಾಗಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪಕಾಲೇಜು ಗೇಟ್ ಬಳಿ ಕೊನೆಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಬೆಳಗ್ಗೆ 9.30ಕ್ಕೆ ಸ್ಪರ್ಧೆಆರಂಭವಾಗಲಿದ್ದು, ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಜಗದೀಶ್‌ರೈ, ಐತಪ್ಪರೈ, ಬಿ.ಕೆ. ರವೀಂದ್ರರೈ, ಜಯಪ್ರಕಾಶ್‌ರೈ, ಮಡಿಕೇರಿ ನಗರಸಭೆ ಸದಸ್ಯ ಅರುಣ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.

ನಂತರ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪಕಾಲೇಜು ಆವರಣದಲ್ಲಿ ಪುಲ್‌ ಅಪ್ಸ್ ಸ್ಪರ್ಧೆ ಇರಲಿದೆ. ಬಳಿಕ ಬಾಲಭವನ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಹಾಗೂ ಪ್ರಶಸ್ತಿ ವಿತರಣೆ ನೆರವೇರಲಿದೆ. ಸಂಘದ ಅಧ್ಯಕ್ಷ ವಸಂತರೈ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಜಯಪ್ರಕಾಶ್‌ರೈ, ಐತಪ್ಪರೈ ಉಪಸ್ಥಿತರಿರಲಿದ್ದು, ಮಕ್ಕಳ ತಜ್ಞ ವೈದ್ಯ ಹಾಗೂ ನಿವೃತ್ತ ಸೇನಾಧಿಕಾರಿ ಮೇಜರ್‌ಡಾ. ಕುಶ್ವಂತ್ ಕೋಳಿಬೈಲು ಮುಖ್ಯ ಭಾಷಣ ಮಾಡಲಿದ್ದಾರೆ.

ಜಿಲ್ಲೆಯ ವಿವಿಧೆಡೆಯ ನೂರಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ಸ್ಪರ್ಧೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಓಟ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ತಲಾ ನಾಲ್ಕು ಸ್ಪರ್ಧಿಗಳಿಗೆ ಹಾಗೂ ಪುಲ್‌ಅಪ್ಸ್‌ನಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ವಿಶೇಷ ಬಹುಮಾನ ನೀಡಲಾಗುವುದು. ಹಾಗೂ ಸ್ಪರ್ಧೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸ್ಪರ್ಧಿಗೆ ವಿಶೇಷ ಉಡುಗೊರೆ ನೀಡಲಾಗುವುದೆಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು