News Karnataka Kannada
Sunday, April 28 2024
ಮಡಿಕೇರಿ

ಸಂಪಾಜೆ: ಸ್ವಂತ ತಮ್ಮಂದಿರಿಂದಲೇ ಅಣ್ಣನ ಹತ್ಯೆ

Brother killed by his own brothers
Photo Credit : News Kannada

ಸಂಪಾಜೆ: ಆಸ್ತಿವಿವಾದ ಹಿನ್ನಲೆಯಲ್ಲಿ ಸ್ವಂತ ತಮ್ಮಂದಿರೇ ಅಣ್ಣನನ್ನು ಕೊಚ್ಚಿ ಕೊಲೆಗೈದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ಕುದ್ರೆಪಾಯ ನಿವಾಸಿ ಉಸ್ಮಾನ್ ಹತ್ಯೆಯಾದ ದುರ್ದೈವಿ.

ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.

ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ ಇವರಿಗೆ ಜಾಗವಿದೆ ಎಂದು ತಿಳಿದು ಬಂದಿದೆ. ಸದ್ಯ ಇವರು ಪುತ್ತೂರಿನ ಸಂಪ್ಯದಲ್ಲಿ ನೆಲೆಸಿದ್ದರು ಎನ್ನಲಾಗುತ್ತಿದೆ. ಕೊಡಗು ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು