News Karnataka Kannada
Monday, May 20 2024
ಮಡಿಕೇರಿ

ಸಂಪಾಜೆ: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ಬೇಟೆಯಾಡಿದ ಅರಣ್ಯ ಅಧಿಕಾರಿಗಳು

Sampaje: Forest officials hunt down those who were hunting wild animals
Photo Credit : News Kannada

ಕೊಡಗು: ಸಂಪಾಜೆ ವಲಯದ ದಬ್ಬಡ್ಕದ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪಿಗಳ ಮನೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಬೇಯಿಸಿದ ಮಾಂಸಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಬ್ಬಡ್ಕ ಉಪ ವಲಯದ, ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಬೇಟೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮದನ್ ಕುಮಾರ್ ಹೊಸೂರು, ಪನೇಡ್ಕ ಗಣಪತಿ, ಹಾಗೂ ಪ್ರಸನ್ನ ಪನೇಡ್ಕ ಇವರ ಮನೆಗೆ ದಾಳಿ ಮಾಡಿ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ. ಅರಣ್ಯಾಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಟಿ ಪೂವಯ್ಯ ಇವರ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಮಧು ಸೂದನ್ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮಹೋಮ್ಮದ್, ಗಸ್ತು ಅರಣ್ಯ ಪಾಲಕ ಚಂದ್ರಪ್ಪ ಬಣಕಾರ್, ಕಾರ್ತಿಕ್ ಡಿ. ಹಾಗೂ ಸಿಬ್ಬಂದಿಗಳಾದ ಮನೋಜ್, ದುರ್ಗಾ ಪ್ರಸಾದ್, ಗಗನ್, ಶರತ್, ಶಂಕರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು