News Karnataka Kannada
Sunday, May 12 2024
ಮಡಿಕೇರಿ

ಸೋಮವಾರಪೇಟೆ: ನ. 23 ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ಆಚರಣೆ

Kannada
Photo Credit : By Author

ಸೋಮವಾರಪೇಟೆ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ನ.23 ಬುಧವಾರದಂದು ಸ್ಥಳೀಯ ಮಹಿಳಾ ಸಮಾಜದಲ್ಲಿ ಮಧ್ಯಾಹ್ನ 2:30ಕ್ಕೆ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಆಚರಿಸಲಾಗುವುದು.

ಮಡಿಕೇರಿ ವಿಧಾನಸಭಾ ಶಾಸಕರಾದ ಅಪ್ಪಚ್ಚು ರಂಜನ್ ಕಾರ್ಯಕ್ರಮವನ್ನು ಉದ್ಘಾಟಿಸುವರು.ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಮ್. ಪಿ. ಕೇಶವ ಕಾಮತ್ ಪ್ರಾಸ್ತಾವಿಕ ನುಡಿಗಳನ್ನುಳನಾಡುವರು.

ಮಾಜಿ ಸಚಿವರಾದ ಬಿ. ಎ. ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ಜಿ. ಮೇದಪ್ಪ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ. ಪಿ. ರಮೇಶ್, ತಾಲೂಕು ದಂಡಾಧಿಕಾರಿಗಳು ಹಾಗೂ ತಹಶೀಲ್ದಾರ್ ಎಸ್. ಎನ್. ನರಗುಂದ್, ಪೊಲೀಸ್ ವೃತ್ತ ನಿರೀಕ್ಷಕರಾದ ರಾಮಚಂದ್ರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ. ವಿ. ಸುರೇಶ್, ಪ. ಪಂ. ಅಧ್ಯಕ್ಷ ಪಿ. ಕೆ. ಚಂದ್ರು ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ಡಾ. ಕಾವೇರಿ ಪ್ರಕಾಶ್, ಪ್ರಾಧ್ಯಾಪಕರು ಪ್ರಥಮ ದರ್ಜೆ ಕಾಲೇಜು ಮಡಿಕೇರಿ ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ದಾ. ಸುಜಾಲಾದೇವಿ, ಶಿಕ್ಷಕರು, ಸಾಹಿತಿ, ಹಾಗೂ ಕವಿ ಶನಿವಾರಸಂತೆ, ಪೊಲೀಸ್ ವೃತ್ತ ನಿರೀಕ್ಷಕರಾದ ಪರಶಿವಮೂರ್ತಿ, ಶನಿವಾರಸಂತೆ, ಡಾ. ಸತೀಶ್, ಸರ್ಜನ್ ಸರಕಾರಿ ಸಾರ್ವಜನಿಕ ಆಸ್ಪತ್ರೆ ಸೋಮವಾರಪೇಟೆ, ಕೆ. ಕೆ. ಮುತ್ತಣ್ಣ, ಕೃಷಿಕರು ಶಾಂತಳ್ಳಿ, ಹಾಗೂ ಸಾಹಿತಿಗಳು, ಕವಿಗಳಾದ ನ. ಲ. ವಿಜಯ ಅವರುಗಳನ್ನು ಸನ್ಮಾನಿಸಿ ಗೌರವಿಸುವವಾಗುವುದು.

ಎಸ್. ಎಸ್. ಎಲ್. ಸಿ. ಕನ್ನಡ ಭಾಷಾ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಬೋಧನೆ ಮಾಡಿದ ಶಿಕ್ಷಕರುಗಳಿಗೆ, ಸನ್ಮಾನ, ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಬಹುಮಾನ ವಿತರಣೆ ಕಾರ್ಯಕ್ರಮವಿರುತ್ತದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಡಿ.ವಿಜೇತ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು