News Karnataka Kannada
Saturday, May 04 2024
ಮಡಿಕೇರಿ

ಸೋಮವಾರಪೇಟೆ: ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ

Somwarpet: The Bharatiya Janata Party (BJP) has organised every education class programme
Photo Credit : By Author

ಸೋಮವಾರಪೇಟೆ: ತಾಲೂಕಿನ ಕರ್ಕಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ರಾಬಿನ್ ದೇವಯ್ಯ ಮಾತನಾಡಿ ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವುದರ ಮೂಲಕ ಸೇವಾ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ದೇಶ ಹೆಚ್ಚಿನ ಪ್ರಗತಿ ಸಾಧಿಸುತ್ತಿದೆ, ಪ್ರತಿಯೊಬ್ಬ ಕಾರ್ಯಕರ್ತನ ಶ್ರಮದಿಂದ ಇಂದು ದೇಶ ಸೇರಿದಂತೆ ಹಲವಷ್ಟು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದು ಹೇಳಿದರು.

ಹಿರಿಯರ ತ್ಯಾಗ ಬಲಿದಾನದಿಂದ ಬಿಜೆಪಿ ಪಕ್ಷ ಬೆಳೆದು ಬಂದಿದೆ ಎಂದು ಈ ಸಂದರ್ಭ ನುಡಿದರು. ರಾಜ್ಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆಯವರು ಮಾತನಾಡಿ ಪಕ್ಷದಲ್ಲಿ ಯುವಕರ ಪರಿಶ್ರಮದಿಂದ ಇಂದು ಸಂಘಟನೆ ಪ್ರಬಲವಾಗಿ ಬೆಳೆಯಲು ಸಾಧ್ಯ ವಾಗಿದೆ ಎಂದರು.

ವೇದಿಕೆಯಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಬಿಜೆಪಿ ಮಂಡಲ ಅಧ್ಯಕ್ಷ ಮನು ಕುಮಾರ್ ರೈ ರಾಜ್ಯ ರಾಜಕಾರಣಿ ಸದಸ್ಯ ಮಹೇಶ್ ತಿಮ್ಮಯ್ಯ ಬಿಜೆಪಿ ಮುಖಂಡರಾದ ರೂಪ ಸತೀಶ್ ಮಂಜುಳಾ ಸುಬ್ರಮಣ್ಯ ಎಚ್ ಕೆ ಮಾದಪ್ಪ ಮುಂತಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು