ಸೋಮವಾರಪೇಟೆ: ತಾಲೂಕಿನ ಕರ್ಕಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ರಾಬಿನ್ ದೇವಯ್ಯ ಮಾತನಾಡಿ ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವುದರ ಮೂಲಕ ಸೇವಾ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ದೇಶ ಹೆಚ್ಚಿನ ಪ್ರಗತಿ ಸಾಧಿಸುತ್ತಿದೆ, ಪ್ರತಿಯೊಬ್ಬ ಕಾರ್ಯಕರ್ತನ ಶ್ರಮದಿಂದ ಇಂದು ದೇಶ ಸೇರಿದಂತೆ ಹಲವಷ್ಟು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದು ಹೇಳಿದರು.
ಹಿರಿಯರ ತ್ಯಾಗ ಬಲಿದಾನದಿಂದ ಬಿಜೆಪಿ ಪಕ್ಷ ಬೆಳೆದು ಬಂದಿದೆ ಎಂದು ಈ ಸಂದರ್ಭ ನುಡಿದರು. ರಾಜ್ಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆಯವರು ಮಾತನಾಡಿ ಪಕ್ಷದಲ್ಲಿ ಯುವಕರ ಪರಿಶ್ರಮದಿಂದ ಇಂದು ಸಂಘಟನೆ ಪ್ರಬಲವಾಗಿ ಬೆಳೆಯಲು ಸಾಧ್ಯ ವಾಗಿದೆ ಎಂದರು.
ವೇದಿಕೆಯಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಬಿಜೆಪಿ ಮಂಡಲ ಅಧ್ಯಕ್ಷ ಮನು ಕುಮಾರ್ ರೈ ರಾಜ್ಯ ರಾಜಕಾರಣಿ ಸದಸ್ಯ ಮಹೇಶ್ ತಿಮ್ಮಯ್ಯ ಬಿಜೆಪಿ ಮುಖಂಡರಾದ ರೂಪ ಸತೀಶ್ ಮಂಜುಳಾ ಸುಬ್ರಮಣ್ಯ ಎಚ್ ಕೆ ಮಾದಪ್ಪ ಮುಂತಾದವರು ಉಪಸ್ಥಿತರಿದ್ದರು.