News Karnataka Kannada
Monday, April 29 2024
ಮಡಿಕೇರಿ

ಶ್ರದ್ಧೆ ಮತ್ತು ಕಠಿಣ ಶ್ರಮ ಇದ್ದರೆ ಯಶಸ್ಸು ಸಾಧ್ಯ : ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್ ಸಲಹೆ

Madikeri
Photo Credit : By Author

ಮಡಿಕೇರಿ ಜೂ.24 : ಕ್ರೀಡೆಯಲ್ಲಿ ತೊಡಗಿಸಿಕೊಂಡವರಲ್ಲಿ ಶ್ರದ್ಧೆ ಮತ್ತು ಕಠಿಣ ಶ್ರಮ ಇದ್ದರೆ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಹೇಳಿದರು.

ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 6ನೇ ವರ್ಷದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟವನ್ನು ಉದ್ಘಾಟಿಸಿ  ಮಾತನಾಡಿದರು.

ಕೊಡಗು ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ನ ಕೆಲಸವನ್ನು ಶ್ಲಾಘಿಸಿದ ಅವರು, ಕೆಲವು ತಿಂಗಳುಗಳ ಹಿಂದೆ ಭೇಟಿ ನೀಡಿದಾಗ ಮೂಲಭೂತ ಸೌಕರ್ಯಗಳ ಕೊರತೆಯಿದ್ದ ಒಳಾಂಗಣ ಕ್ರೀಡಾಂಗಣ ಈಗ ಕ್ರೀಡಾ ಪಟುಗಳ ಬಳಕೆಗೆ ಯೋಗ್ಯವಾಗಿದೆ ಎಂದು ಸಂತಸಪಟ್ಟರು. ಶಾಶ್ವತ ಬೆಳಕಿನ ವ್ಯವಸ್ಥೆ ಮತ್ತು ಇನ್ನಷ್ಟು ಕ್ರೀಡಾ ಸಾಮಗ್ರಿಗಳನ್ನು ಹೆಚ್ಚಿಸುವಂತೆ ಸಲಹೆ ನೀಡಿದರು.

ಎಲ್ಲರೂ ಗೆದ್ದೇ ಗೆಲ್ಲುತ್ತೇವೆ ಎಂದು ಭಾವಿಸಬಾರದು, ಗೆಲುವಿಗಾಗಿ ಕಠಿಣ ಶ್ರಮ ವಹಿಸಬೇಕು. ಗೆಲವಿಗಿಂತ ಭಾಗವಹಿಸುವಿಕೆ ಮುಖ್ಯ, ಆಗ ಅನುಭವ ಹೆಚ್ಚುತ್ತದೆ ಎಂದರು.

ಮುಂದಿನ ದಿನಗಳಲ್ಲಿ  ರಾಜ್ಯಮಟ್ಟದ ಕ್ರೀಡಾಕೂಟ ಆಯೋಜನೆಗೊಳ್ಳಲ್ಲಿ ಎಂದು ಶುಭ ಹಾರೈಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು