News Karnataka Kannada
Saturday, May 04 2024
ಮಡಿಕೇರಿ

ಸುಂಟಿಕೊಪ್ಪ: ತಾಜ್ಯ ನೀರು ಮರು ಸಂಸ್ಕರಣ ಘಟಕ ನಿರ್ಮಾಣ ಕಾಮಗಾರಿಗೆ ಚಾಲನೆ

Suntikoppa: Construction of Tajya water re-treatment plant begins
Photo Credit : By Author

ಸುಂಟಿಕೊಪ್ಪ. ಡಿ.16: ಸುಂಟಿಕೊಪ್ಪದಲ್ಲಿ ತಾಜ್ಯ ನೀರು ಮರು ಸಂಸ್ಕರಣ ಘಟಕ ನಿರ್ಮಾಣ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು.

ಸುಂಟಿಕೊಪ್ಪ ಗ್ರಾ.ಪಂ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಸಂಸ್ಕರಿಸಲಾದ ನೀರನ್ನು ಊರಿನ ಗಿಡಗಳಿಗೆ ಮತ್ತು ಇತರ ಉದ್ದೇಶಗಳಿಗೆ ಬಳಸಬಹುದಾಗಿದೆ. ರೂ.80 ಲಕ್ಷದ ಈ ಘಟಕವು ಜಿಲ್ಲೆಯಲ್ಲಿ 13 ಗ್ರಾಮ ಪಂಚಾಯಿತಿಗಳಿಗೆ ಮಂಜೂರಾಗಿದ್ದು, ಭಾಗಮಂಡಲದ ಬಳಿಕ ಸುಂಟಿಕೊಪ್ಪ ಗ್ರಾಮ ಪಂಚಾಯಿತಿಗೆಯಲ್ಲಿ ಈ ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದ ಅವರು, ನೀರಿನ ಮಿತವ್ಯಯ ಮತ್ತು ಮರುಬಳಕೆಗೆ ಸಾಕಷ್ಟು ಸಹಾಯಕಾರಿಯಾಗಿದೆ ಎಂದು ಹೇಳಿದರು.

ಈ ಯೋಜನೆ ಮತ್ತು ಘಟಕದ ಪ್ರಯೋಜನವನ್ನು ಸಾರ್ವಜನಿಕರು ಹೊಂದುವಂತಾಗಬೇಕು ಆ ಮೂಲಕ ನಮ್ಮ ಪರಿಸರ ನಮ್ಮ ಗ್ರಾಮವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಲು ಕೈಜೋಡಿಸಬೇಕೆಂದು ಕರೆ ನೀಡಿದರು.

ಕೆಂದ್ರ ಸರಕಾರದ ಜಲಜೀವನ್ ಮೀಷನ್ ಯೋಜನೆಯ ಮೂಲಕ ಮನೆ ಮನೆಗೆ ನಲ್ಲಿ ಸಂಪರ್ಕದ ಮೂಲಕ ಪ್ರತಿಯೊಬ್ಬ ನಾಗರೀಕರಿಗೆ ತಲಾ ನೂರು ಲೀಟರ್ ನೀರು ಒದಗಿಸುವ ಉದ್ದೇಶವನ್ನು ಹೊಂದಲಾಗಿದ್ದು, ನಿಗಧಿತ ಕಾಲಮಿತಿಯಲ್ಲಿ ಯೋಜನೆ ಜಾರಿಗೊಳ್ಳಲಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು