ಸುಂಟಿಕೊಪ್ಪ: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಗೆ ಸೇರಿದ ಭಾಗ 2ನೇ ಗ್ರಾಮದಲ್ಲಿ ರಸ್ತೆ ಸರಿಪಡಿಸಿ ಕೊಡದಿದ್ದಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಕೂರು ಶಿರಂಗಾಲ ಗ್ರಾಮ ಭಾಗ2 ಕ್ಕೆ ತೆರಳುವ ಸಾರ್ವಜನಿಕ ಮುಖ್ಯ ರಸ್ತೆಯು ಅತಿಯಾದ ಮಳೆಯಿಂದ ಇತ್ತೀಚೆಗೆ ತೀರಾ ಹದಗೆಟ್ಟ ಕಾರಣ ವಾಹನಗಳು ಸಂಚರಿಸಲು ಹಾಗೂ ಸಾರ್ವಜನಿಕರಿಗೆ ನಡೆದಾಡಲು ಸಹ ಕಷ್ಟವಾಗುತ್ತಿದೆ. ಈ ಭಾಗದಲ್ಲಿ 25 ಮನೆಗಳಿದ್ದು 150 ಮತದಾರರಿರುತ್ತಾರೆ. ನಮ್ಮ ಗ್ರಾಮಕ್ಕೆ ತೆರಳುವ ರಸ್ತೆಯನ್ನು ಸರಿಪಡಿಸಿ ಕೊಡದಿದ್ದರೆ ನಾವುಗಳು ಮುಂಬರುವ ಎಲ್ಲಾ ಮತದಾನವನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಗ್ರಾಮಸ್ಥರಾದ ಪವನ್, ಅನಿಲ್, ಭಾನುಮತಿ, ರವಿ, ಶೀತಲ್ ಇತರ ಗ್ರಾಮಸ್ಥರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾನುವಾರ ಪ್ರತಿಭಟನೆ: 1991ರಲ್ಲಿ ಈ ರಸ್ತೆಯನ್ನು ಮೆಟ್ಲಿಂಗ್ ಮಾತ್ರ ಮಾಡಲಾಗಿತ್ತು.ನಂತರ 2 ಬಾರಿ 100 ಮೀಟರ್ ನಷ್ಟು ರಸ್ತೆ ಡಾಂಬರೀಕರಣ ಮಾಡಲಾಗಿದ್ದು, ಆದರೆ ಉಳಿದ ಒಂದೂವರೆ ಕಿ.ಮೀ.ನಷ್ಟು ಸಾರ್ವಜನಿಕ ರಸ್ತೆ ಇದುವರೆಗೂ ಡಾಂಡರೀಕರಣವಾಗಲೀ, ಕಾಮಗಾರಿಯಾಗಲಿ ಮಾಡಲಿಲ್ಲ.ಈ ನಿಟ್ಟಿನಲ್ಲಿ ಅಸಮಾಧಾನಗೊಂಡ ಈ ಭಾಗದ ಗ್ರಾಮಸ್ಥರು ಮಾ.19(ಭಾನುವಾರ) ಗ್ರಾಮಸ್ಥರು ಬೆಳಿಗ್ಗೆ 9 ಗಂಟೆಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…
ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ ಕಾಲಿಗೆ…
ಅಮೇರಿಕಾದಲ್ಲಿ ಎಂಡಿಎಚ್ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…
ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…