News Karnataka Kannada
Saturday, May 04 2024
ಮಡಿಕೇರಿ

ಸುಂಟಿಕೊಪ್ಪ: ಕೊಡಗಿನಲ್ಲಿ ನರಹಂತಕ ಕಾಡಾನೆ ಸೆರೆ

Suntikoppa: Wild elephant captured in Kodagu
Photo Credit : News Kannada

ಸುಂಟಿಕೊಪ್ಪ: ಕಳೆದೊಂದು ವಾರದಿಂದ ಈ ಭಾಗದಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಸೆರೆಹಿಡಿದಿದ್ದಾರೆ. 18-20 ವರ್ಷ ಪ್ರಾಯದ ಕಾಡನೆ ದಾಳಿಗೆ ಸಿಲುಕಿ ಇತ್ತೀಚೆಗೆ ಅರಣ್ಯ ಸಿಬ್ಬಂದಿ ಗಿರೀಶ್‌ ಎಂಬುವರು ಮೃತಪಟ್ಟಿದ್ದರು.

ಹಲವು ವಾಹನಗಳನ್ನು ಧ್ವಂಸಗೊಳಿಸಿದ್ದ ಈ ಆನೆ ತೋಟಗಳಲ್ಲಿದ್ದ ಬೆಳೆಗಳನ್ನು ನಾಶಪಡಿಸಿತ್ತು. ವಾಹನ ಸವಾರರ ಮೇಲೆ ಎರಗಿ ಅವರನ್ನು ಗಾಯಗೊಳಿಸುತ್ತಿತ್ತು. ಇದರಿಂದ ಕೆದಿಕಲ್‌ ವ್ಯಾಪ್ತಿಯಲ್ಲಿ ಜನರು ಓಡಾಡುವುದಕ್ಕೆ ಭಯಪಡುವ ವಾತಾವರಣ ಸೃಷ್ಟಿಯಾಗಿತ್ತು.

ದುಬಾರೆ ಆನೆ ಶಿಬಿರದ ಹರ್ಷ, ಪ್ರಶಾಂತ, ಅಜಯ್‌, ಲಕ್ಷ್ಮಣ, ವಿಕ್ರಮ ಎಂಬ 5 ಸಾಕಾನೆಗಳ ನೆರವಿನಿಂದ ಸುಮಾರು ನೂರು ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಸಾಹಸಪಟ್ಟು ಆನೆಯನ್ನು ಸೆರೆಹಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು