ಕೊಡಗು: ಕೊಡಗಿನ ಆರಾಧ್ಯದೈವ ಕಾವೇರಿ ತೀರ್ಥೋದ್ಭವಕ್ಕೆ ಈ ಬಾರಿಯ ಮಹೂರ್ತ ನಿಗದಿಯಾಗಿದೆ. ಕೊಡಗು ಜಿಲ್ಲೆಯ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪ್ರತಿ ವರ್ಷದಂತೆ ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವಕ್ಕೆ ನಡೆಯಲಿದ್ದು, ಮಂಗಳವಾರ ಮಧ್ಯರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಮಹೂರ್ತ ನಿಗದಿ ಮಾಡಲಾಗಿದೆ.
ಈ ಬಾರಿ ಮಳೆಯ ಕೊರತೆಯಿಂದ ಕೃಷ್ಣರಾಜಸಾಗರ ಜಲಾಶಯ ತುಂಬಿಲ್ಲ. ಮತ್ತೊಂದೆಡೆ ತಮಿಳುನಾಡು ಕೂಡ ಕಾವೇರಿ ನೀರು ಹರಿಸಲಾಗುತ್ತಿದ್ದು, ರಾಜ್ಯಾದ್ಯಂತ ಹೋರಾಟಗಳು ನಡೆಯುತ್ತಿದೆ. ಈ ಜಂಜಾಟದ ನಡುವೆಯೇ ತೀರ್ಥೋದ್ಭವಕ್ಕೆ ಸಿದ್ದತೆಗಳು ಆರಂಭವಾಗಿದೆ.
ಕೊಡಗು ಮಾತ್ರವಲ್ಲದೇ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಾನಾ ಭಾಗಗಳಿಂದ ಭಕ್ತರು ಕಾವೇರಿ ತೀರ್ಥೋದ್ಭವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.
ಭಕ್ತರು ತೀರ್ಥೋದ್ಭವಕ್ಕೆ ಆಗಮಿಸಿ ಸ್ನಾನ ಮಾಡಿ ಇಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಕೊಡಗು ಜಿಲ್ಲಾಡಳಿತ ಈಗಾಗಲೇ ಸಿದ್ಧತೆ ಆರಂಭಿಸಿದೆ.