News Karnataka Kannada
Thursday, May 09 2024
ಮಡಿಕೇರಿ

ಕೊಡಗಿನಲ್ಲಿ ಭೂ ಪರಿವರ್ತನೆ ಪ್ರಕ್ರಿಯೆ ಆತಂಕಕಾರಿ

ಕೊಡಗಿನಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಭೂ ಪರಿವರ್ತನೆಯಿಂದ ಜಲಮೂಲಗಳಿಗೆ ಧಕ್ಕೆಯಾಗುತ್ತಿದೆ ಹಾಗೂ ಕಾವೇರಿ ನದಿಗೆ ನೀರಿನ ಒಳಹರಿವು ಕಡಿಮೆಯಾಗುತ್ತಿದೆ  ಎಂದು ಕೊಡಗು ಮತ್ತು ಕಾವೇರಿ ಉಳಿಸಿ ಅಭಿಯಾನದ ಸಂಯೋಜಕ ಕರ್ನಲ್ ಸಿ ಮುತ್ತಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.
Photo Credit : By Author

ಮಡಿಕೇರಿ: ಕೊಡಗಿನಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಭೂ ಪರಿವರ್ತನೆಯಿಂದ ಜಲಮೂಲಗಳಿಗೆ ಧಕ್ಕೆಯಾಗುತ್ತಿದೆ ಹಾಗೂ ಕಾವೇರಿ ನದಿಗೆ ನೀರಿನ ಒಳಹರಿವು ಕಡಿಮೆಯಾಗುತ್ತಿದೆ  ಎಂದು ಕೊಡಗು ಮತ್ತು ಕಾವೇರಿ ಉಳಿಸಿ ಅಭಿಯಾನದ ಸಂಯೋಜಕ ಕರ್ನಲ್ ಸಿ ಮುತ್ತಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು ಬೆಂಗಳೂರು ನಗರ ಗಂಭೀರವಾದ ನೀರಿನ ಸಮಸ್ಯೆಯಿಂದ ಬಳಲುತ್ತಿದೆ ಅಲ್ಲಿನ ನಾಗರಿಕರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಇದಕ್ಕೆ ಆನಿಯಂತ್ರಿತ ನಾಗರೀಕರಣ ಮತ್ತು ಕೊಡಗಿನಲಾಗುತ್ತಿರುವ ವಾಣಿಜ್ಯ ಭೂ ಪರಿವರ್ತನೆಗಳು ಕಾರಣವಾಗಿದೆ ಎಂದು  ಹೇಳಿದರು.

ಜಿಲ್ಲಾಧಿಕಾರಿಗಳು ಕೂಡಲೇ  ವಾಣಿಜ್ಯ ಭೂ ಪರಿವರ್ತನೆ ಆದೇಶ  ನೀಡುವುದನ್ನು ನಿಲ್ಲಿಸಬೇಕು. ಹಾಗೆಯೇ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ  ವಾಣಿಜ್ಯ ಉದ್ದೇಶಕ್ಕಾಗಿ ಭೂ ಪರಿವರ್ತನೆಗೆ ಎನ್ ಓ ಸಿ ನೀಡದಂತೆ ನಿರ್ಣಯ ಕೈಗೊಳ್ಳುವಂತಾಗಬೇಕು. ಕೊಡಗಿನ ಜನತೆ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಬಾರಿ ಗಂಡಾಂತರ ಕಾದಿದೆ ಎಂದು ಎಚ್ಚರಿಕೆ ನೀಡಿದರು.

ಹೊರ ರಾಜ್ಯದ ಹೊರದೇಶದ ಹಲವು ಸಿರಿವಂತರು ಕೊಡಗಿಗೆ ಲಗ್ಗೆ ಇಟ್ಟು ರೆಸಾರ್ಟ್ ಮತ್ತಿತರ ವಾಣಿಜ್ಯ ಚಟುವಟಿಕೆಯನ್ನು ಆರಂಭಿಸಲು ಭೂಮಿಯನ್ನು ಖರೀದಿಸಿ ವಾಣಿಜ್ಯ ಉದ್ದೇಶಕ್ಕಾಗಿ ಭೂ ಪರಿವರ್ತನೆಯನ್ನು ಮಾಡಿ ಪ್ರಕೃತಿಯನ್ನು ನಾಶ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಅಭಿಯಾನದ ಪ್ರಮುಖರಾದ ಮೋದೂರು ಶಿವಶಂಕರ್, ಗೋಪಿನಾಥ್ ತಿಮ್ಮಯ್ಯ, ಹಾಗೂ ಶ್ಯಾಮ್  ಬೋಪಯ್ಯ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು