News Karnataka Kannada
Sunday, May 12 2024
ಮಡಿಕೇರಿ

ವಿರಾಜಪೇಟೆ: ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹ!

Pete
Photo Credit : By Author

ವಿರಾಜಪೇಟೆ : ಬಡ ಕುಟುಂಬದ ದಲಿತರು, ಆದಿವಾಸಿಗಳಿಗೆ ಸ್ವಂತ ಸೂರು ಇಲ್ಲದೆ ಬಾಡಿಗೆ ಮನೆ ಹಾಗೂ ಲೈನ್ ಮನೆಗಳಲ್ಲಿ ವಾಸಮಾಡುತ್ತಿದ್ದು ನಿವೇಶನಕ್ಕಾಗಿ ಅನೇಕ ವರ್ಷಗಳಿಂದ ಹೋರಾಟ ನಡೆಸಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಭಾರತ ಕಮ್ಯುನಿಷ್ಟ್ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳಿಯ ನಿವಾಸಿಗಳು ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಕಾರ್ಮಾಡು ಗ್ರಾಮ ಪಂಚಾಯಿತಿ ಎದುರು ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ” ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸಿ.ಪಿ.ಐ.ಎಂ ಕಾರ್ಯದರ್ಶಿ ಎ.ಮಹದೇವ್ ಮಾತನಾಡಿ, ಅಮ್ಮತ್ತಿ ಕಾರ್ಮಾಡು ವ್ಯಾಪ್ತಿಯಲ್ಲಿ ಅನೇಕ ದಲಿತರು ಮತ್ತು ಆದಿವಾಸಿಗಳು ಸ್ವಂತ ಮನೆ ಸೂರು ಇಲ್ಲದೆ ಜೀವನ ನಡೆಸುತ್ತಿದ್ದಾರೆ. 2010 ರಿಂದಲೂ ನಿವೇಶನಕ್ಕಾಗಿ ಸ್ಥಳಿಯ ಪಂಚಾಯಿತಿಗೆ ಅರ್ಜಿ ಸಲ್ಲಿಸುತ್ತಿದ್ದರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾರು ಗಮನ ಹರಿಸದಿರುವುದರಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಮೇಲಾಧಿಕಾರಿಗಳು ಬಂದು ಪ್ರತಿಭಟನೆ ಸ್ಥಳದಲ್ಲಿಯೇ ತೀರ್ಮಾನ ಕೈಗೊಳ್ಳಬೇಕು ಇಲ್ಲವಾದಲ್ಲಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದರು.

ನಂತರ ವಿರಾಜಪೇಟೆ ತಹಸೀಲ್ದಾರ್ ಅರ್ಚನಾ ಭಟ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು.ಬಳಿಕ ಪ್ರತಿಭಟನೆಯಲ್ಲಿದ್ದ ಮುಖಂಡರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ.ನಾಣಯ್ಯ, ಅಭಿವೃದ್ಧಿ ಅಧಿಕಾರಿ ಎ.ಟಿ.ಮಾನಸ, ಸದಸ್ಯ ಅಭಿಜೀತ್, ಕಂದಾಯ ಪರಿವೀಕ್ಷಕ ಬಿ.ಆರ್.ಅನೀಲ್ ಕುಮಾರ್, ಗ್ರಾಮಲೆಕ್ಕಿಗರಾದ ದೇವಯ್ಯ ಅವರುಗಳೊಂದಿಗೆ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿ ನಿರಾಶ್ರಿತರು, ಬಡ ಕಾರ್ಮಿಕರು ಮತ್ತು ಆದಿವಾಸಿಗಳು ಮನೆ ಇಲ್ಲದವರನ್ನು ಗುರುತಿಸಿ ಪಟ್ಟಿ ಮಾಡಿ ಗ್ರಾಮ ಸಭೆಯಲ್ಲಿ ಚರ್ಚಿಸಿ ಮಾಹಿತಿ ನೀಡುವಂತೆ ಗ್ರಾ,ಪಂ,ಪಿಡಿಓ ಗೆ ಸೂಚಿಸಿದರು.

ಈ ಸಂಭಂದ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಬಗೆಹರಿಸುವುದಾಗಿ ತಿಳಿಸಿದ ತಹಸೀಲ್ದಾರ್ ಅರ್ಚನಾ ಭಟ್ ನಂತರ ಪ್ರತಿಭಟನಾ ಕಾರರನ್ನುದ್ದೇಶಿಸಿ ಸರ್ಕಾರದ ಸೌಲಭ್ಯಗಳನ್ನು ಪ್ರತಿಯೋಬ್ಬರು ಪಡೆದುಕೊಳ್ಳುವಂತಾಗಬೇಕು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದಾಗ ಪ್ರತಿಭಟನೆ ಕೈಬಿಡಲಾಯಿತು.

ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಇಬ್ರಾಹಿಂ, ಹೆಚ್.ಪಿ.ರಮೇಶ್, ಹೋರಾಟ ಸಮಿತಿ ಅಧ್ಯಕ್ಷ ಪಾಪಣ್ಣ, ಉಪಾಧ್ಯಕ್ಷ ಮನೋಜ್, ಸದಸ್ಯರಾದ ಯಶೋದ, ಪುಷ್ಪ, ಕುಮಾರ, ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಭಟನೆ ಸಂದರ್ಭ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗಿತ್ತು. ಡಿವೈಎಸ್‍ಪಿ ನಿರಂಜನ್ ರಾಜೆ ಅರಸ್, ಗೋಣಿಕೊಪ್ಪ ವೃತ್ತನಿರಿಕ್ಷಕ ಗೋವಿಂದರಾಜು, ವಿರಾಶಜಪೇಟೆ ನಗರ ಠಾಣಧಿಕಾರಿ ಶ್ರೀಧರ್ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು