ವಿರಾಜಪೇಟೆ: ಅಮ್ಮತ್ತಿ ಅಮ್ಮತ್ತಿ ರಸ್ತೆ ಮಾರಿಯಮ್ಮ ದೇವಸ್ಥಾನದ ಬಳಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ಜೂನ್ 8 ರಂದು ದಾಳಿ ನಡೆಸಿದ ವಿರಾಜಪೇಟೆ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ತಂಡ ಸಿದ್ದಾಪುರ ನಗರ ನಿವಾಸಿಯಾದ ಅಭಿ, (22 ವರ್ಷ) ಮತ್ತು ವಿರಾಜಪೇಟೆ ಸುಣ್ಣದ ಬೀದಿ ನಿವಾಸಿಯಾದ ಹೆಚ್.ಎಸ್. ಸೂರ್ಯ (21 ವರ್ಷ) ಎಂಬುವರನ್ನು 294 ಗ್ರಾಂ ಗಾಂಜಾದೊಂದಿಗೆ ದಸ್ತಗಿರಿ ಮಾಡಿದ್ದಾರೆ.
ಸದರಿ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿರುತ್ತಾರೆ.
ವಿಶೇಷ ಸೂಚನೆ: ಯುವಕ-ಯುವತಿಯರು ಮಾದಕ ವೈಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಂಶ ಆಪ್ನ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗ ಪಡಿಸುವುದಿಲ್ಲವೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.