ವಿರಾಜಪೇಟೆ: ನಾಲ್ವರು ಅಪರಿಚಿತ ವ್ಯಕ್ತಿಗಳು ಮನೆಯಲ್ಲಿದ್ದ ಮಾಲೀಕನನ್ನ ಕಟ್ಟಿ ಹಾಕಿ ನಗದು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಠಾಣಾ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಂಡೇಪಂಡ ಚಂಗಪ್ಪ ಎಂಬವರು ಮನೆಯಲ್ಲಿ ಒಬ್ಬಂಟಿ ಇರುವ ಸಂದರ್ಭದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು
ಹಲ್ಲೆ ನಡೆಸಿ, ಕುತ್ತಿಗೆಗೆ ಕತ್ತಿ ಇಟ್ಟು ಬೆದರಿಕೆ ಹಾಕಿದ ದರೋಡೆಕೊರರು, ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿ ಮನೆ ಮಾಲಿಕನನ್ನ ಬಾಯಿಗೆ ಬಟ್ಟೆ ತುರಿಕೆ ಕೈ ಕಾಲು ಕಟ್ಟಿ ಮನೆಯ ಸಮೀಪದಲ್ಲಿ ಇದ್ದ ತೋಡಿಗೆ ಎಸೆದು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಎಸ್ ಪಿ ಕ್ಯಾಪ್ಟನ್ ಅಯ್ಯಪ್ಪ ಭೇಟಿ ನೀಡಿ ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದು, ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ ನಡೆಸಿದ್ದಾರೆ .
ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.