News Karnataka Kannada
Monday, April 29 2024
ಮಡಿಕೇರಿ

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ: ಸ್ಥಳಕ್ಕೆ ಎ.ಎಸ್.ಪೊನ್ನಣ್ಣ ಭೇಟಿ 

ಕೊಡಗಿನಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಫಿ ಕೊಯ್ಲು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು ಪರಿಣಾಮ ಆಕೆ ಮೃತಪಟ್ಟಿದ್ದಾರೆ.
Photo Credit : By Author

ಮಡಿಕೇರಿ: ಕೊಡಗಿನಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಫಿ ಕೊಯ್ಲು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು ಪರಿಣಾಮ ಆಕೆ ಮೃತಪಟ್ಟಿದ್ದಾರೆ.

ಈ ಘಟನೆ ವೀರಾಜಪೇಟೆ ಬಳಿಯ ಅಮ್ಮತ್ತಿ ಸಮೀಪದ ಹೊಸೂರು ಬೆಟ್ಟಗೇರಿಯಲ್ಲಿ ನಡೆದಿದ್ದು, ಸ್ಥಳೀಯ ನಿವಾಸಿ ಬೇಬಿ (52) ಮೃತಪಟ್ಟ ಕಾರ್ಮಿಕ ಮಹಿಳೆಯಾಗಿದ್ದಾರೆ. ಈಕೆ ಕಾಫಿ ಕೊಯ್ಲು ಕೆಲಸ ಮುಗಿಸಿಕೊಂಡು ಮರುಳುತ್ತಿದ್ದ ವೇಳೆ ದಿಢೀರ್ ಕಾಡಾನೆ ಎದುರಾಗಿ ಕಾರ್ಮಿಕ ಮಹಿಳೆ ಮೇಲೆ ದಾಳಿ ಮಾಡಿದೆ. ಇದರಿಂದ  ಆಕೆಯ ಹೊಟ್ಟೆ ಹಾಗೂ ಸೊಂಟಕ್ಕೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿದಂತೆ  ಮಾತನಾಡಿದ ಕಾರ್ಮಿಕ ಮುಖಂಡ ಮಹದೇವ್ ಅವರು ಬೆಟ್ಟಗೇರಿ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಾರ್ಮಿಕರು ಕೆಲಸಕ್ಕೆ ತೆರಳಲು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಒತ್ತಾಯಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ  ಹೇಳಿದರಲ್ಲದೆ  ಪರಿಹಾರವನ್ನು ಕೂಡಲೇ ನೀಡುವ ಬಗ್ಗೆ ಭರವಸೆ ನೀಡಿದರಲ್ಲದೆ, ಕಾಡಾನೆಗಳನ್ನು ಕಾಡಿಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಇದೇ ಸಂದರ್ಭ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು