ಮಡಿಕೇರಿ: ಕಾರ್ಯಕರ್ತರೇ ಬಿಜೆಪಿ ಬೆನ್ನುಲುಬಾಗಿದ್ದು, ಕಾರ್ಯಕರ್ತರ ಶ್ರಮದಿಂದಲೇ ಗೆಲವು ಸಾಧ್ಯವಾಗಲಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಕುಂಬೂರಿನಲ್ಲಿರುವ ತನ್ನ ಮನೆ ಆವರಣದಲ್ಲಿ ಸೋಮವಾರಪೇಟೆ ತಾಲೂಕು ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ರಂಜನ್, ಕಾರ್ಯಕರ್ತರ ಸಹಕಾರದಿಂದ ಅಭಿವೃದ್ದಿ ಕಾರ್ಯಗಳು ನಡೆಸಲು ಸಾಧ್ಯವಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ದಿ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಲು ಕಾರ್ಯಕರ್ತರೇ ಸಂಪರ್ಕ ಸೇತು ಎಂದು ಹೇಳಿದರು.
ಕೇಂದ್ರ ಹಾಗು ರಾಜ್ಯ ಸರ್ಕಾರಗಳು ದಿಟ್ಟ ನಿರ್ಧಾರದ ಮೂಲಕ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕಳೆದ ಐದು ವರ್ಷಗಳಲ್ಲಿ ಮಡಿಕೇರಿ ಕ್ಷೇತ್ರಕ್ಕೆ ಸಾವಿರದ ಎಂಟುನೂರು ಕೊಟಿವೆಚ್ಚದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಿದೆ ಎಂದು ರಂಜನ್ ಮಾಹಿತಿ ನೀಡಿದರು.
ಪ್ರಕೃತಿ ವಿಕೋಪ ಹಾಗೂ ಕೊರೋನಾ ಸಂಕಷ್ಟದಲ್ಲಿ ಜನತೆಯ ಹಿತದೃಷ್ಟಿಯಿಂದ ಪರಿಸ್ತಿತಿಯನ್ನು ಸಮರ್ಪಕವಾಗಿ ಕೊಡಗು ಜಿಲ್ಲೆಯಲ್ಲಿ ನಿಭಾಯಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಅಂದಾಜು 5 ಲಕ್ಷ ಜನರಿಗೆ 11ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ ರಂಜನ್, ಜಿಲ್ಲೆಯ ನಲವತ್ತೇಳು ಸಾವಿರ ಮಂದಿ ರೈತರಿಗೆ 138ಕೋಟಿ ಬೆಳೆ ಹಾನಿ ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು .
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹಮತದೊಂದಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದೂ ರಂಜನ್ ವಿಶ್ವಾಸದಿಂದ ನುಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಜಿ.ಬೋಪಯ್ಯ, ಕೊಡಗು ಜಿಲ್ಲೆಯ ಸಮಗ್ರ ಪ್ರಗತಿಗೆ ಬಿಜೆಪಿ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಜನಸಾಮಾನ್ಯರ ಶ್ರೆಯೋಭಿವೖದ್ದಿಗಾಗಿ ಬಿಜೆಪಿ ಪಣ ತೊಟ್ಟಿದೆ. ಕಾರ್ಯಕರ್ತರು ಈ ನಿಟ್ಟಿನಲ್ಲಿ ನೀಡಿದ ಸಹಕಾರ ಮರೆಯುವಂಥದ್ದಲ್ಲ ಎಂದು ಸ್ಮರಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಚುನಾವಣೆ ಉಸ್ತುವಾರಿ ತಿಮ್ಮಪ್ಪ ಶೆಟ್ಟಿ,ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್, ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ,ಜಿಲ್ಲಾ ಪಂಚಾಯ್ತಿ ಮಾಜಿ ಉಪಾದ್ಯೇಕ್ಷೆ ಲೋಕೇಶ್ವರಿ ಗೋಪಾಲ್ ಹಾಗೂ ಬಿಜೆಪಿ ಪ್ರಮುಖರು ಹಾಜರಿದ್ದರು. ಕ್ಷೇತ್ರದ ವಿವಿದೆಡೆಗಳಿಂದ ಕಾರ್ಯಕರ್ತರು ಹಾಜರಿದ್ದರು.