ಮಡಿಕೇರಿ: ಚಾರಣಕ್ಕೆ ತೆರಳಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಜತಿನ್ ಕುಮಾರ್ (25) ಎಂದು ತಿಳಿದಿದೆ. ಈತ ಹರಿಯಾಣ ಮೂಲದ ನಿವಾಸಿಯಾಗಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾ. ತಡಿಯಂಡಮೋಳು ಬೆಟ್ಟ ವೀಕ್ಷಣೆ ವೇಳೆ ಹೃದಯಾಘಾತವಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಜತಿನ್ ಕುಮಾರ್, ತನ್ನ ಸ್ನೇಹಿತರೊಂದಿಗೆ ಮಡಿಕೇರಿಗೆ ಆಗಮಿಸಿದ್ದನು. ಭಾನುವಾರ ಬೆಟ್ಟದ ಮೇಲೆ ತಲುಪಿದಾಗ ಎದೆನೋವು ಕಾಣಿಸಿಕೊಂಡಿದೆ. ಕೆಲಹೊತ್ತಿನಲ್ಲೇ ಎದೆ ನೋವು ಜಾಸ್ತಿ ಆಗಿ ಜತಿನ್ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ಈ ವಿಚಾರವನ್ನು ಸ್ನೇಹಿತರು ಕೂಡಲೇ ಸ್ಥಳೀಯರ ಸಹಾಯದಿಂದ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ದೌಡಾಯಿಸಿದರು ಬೆಟ್ಟದ ತುದಿಯಿಂದ ಕಚ್ಚಾರಸ್ತೆಯಲ್ಲಿ ಹರಸಾಹಸಪಟ್ಟು ಮೃತದೇಹವನ್ನು ಪೊಲೀಸರು ತಂದಿದ್ದಾರೆ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.