ಕೊಡಗು: ಸ್ನಾನಕ್ಕೆಂದು ಕಾವೇರಿ ನದಿಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪದ ನಂಜರಾಯಪಟ್ಟಣದಲ್ಲಿ ನಡೆದಿದೆ.
ಚೆಟ್ಟಳ್ಳಿ ಸಮೀಪದ ಕಂಡಕೆರೆ ನಿವಾಸಿ ಶಂಭು ಎಂಬುವರ ಪುತ್ರ ಶರತ್ (24) ಮೃತ ದುರ್ದೈವಿ.
ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮದಳ ಹಾಗೂ ದುಬಾರೆ ರಾಫ್ಟಿಂಗ್ ತಂಡದಿಂದ ಯುವಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.