ಕೊಡಗು: ಸ್ನಾನಕ್ಕೆಂದು ಕಾವೇರಿ ನದಿಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪದ ನಂಜರಾಯಪಟ್ಟಣದಲ್ಲಿ ನಡೆದಿದೆ.
ಚೆಟ್ಟಳ್ಳಿ ಸಮೀಪದ ಕಂಡಕೆರೆ ನಿವಾಸಿ ಶಂಭು ಎಂಬುವರ ಪುತ್ರ ಶರತ್ (24) ಮೃತ ದುರ್ದೈವಿ.
ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮದಳ ಹಾಗೂ ದುಬಾರೆ ರಾಫ್ಟಿಂಗ್ ತಂಡದಿಂದ ಯುವಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.
ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…
ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.