ಮಂಡ್ಯ: ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಪಡಿತರ ಅಕ್ಕಿ ತುಂಬಿದ್ದ ಲಾರಿಯನ್ನು ಪೊಲೀಸರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಸುಮಾರು 160ಕ್ಕೂ ಹೆಚ್ಚು ಅಕ್ಕಿ ಮೂಟೆ ಲಾರಿಯಲ್ಲಿತ್ತು ಎಂದು ಹೇಳಲಾಗಿದ್ದುಘಿ, ಹನಕೆರೆಯಿಂದ ಕಲ್ಲಹಳ್ಳಿ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ.
ಅಕ್ರಮವಾಗಿ ಲಾರಿಯಲ್ಲಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಎಚ್ಚತ್ತ ಪೊಲೀಸರು ಜೆ.ಸಿ. ವೃತ್ತದಲ್ಲಿ ಲಾರಿಯನ್ನು ವಶಕ್ಕೆ ಪಡೆದು ಠಾಣೆಗೆ ಕೊಂಡೊಯ್ದಿದ್ದಾರೆ.
ಆಂಧ್ರದ ಪಡಿತರ ಅಕ್ಕಿಯನ್ನು ಮಂಡ್ಯಕ್ಕೆ ತಂದು ನಗರದ ಬಾಲಾಜಿ ರೈಸ್ಮಿಲ್ನಲ್ಲಿ ಪಾಲೀಷ್ ಮಾಡಿ ವಿದೇಶಕ್ಕೆ ರ್ತು ಮಾಡುತ್ತಿದ್ದ ಜಾಲವನ್ನು ಇತ್ತೀಚೆಗೆ ತಹಸೀಲ್ದಾರ್ ಚಂದ್ರಶೇಖರ ಶಂಗಾಳಿ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದರು.
ಇಂತಹುದ್ದೇ ಜಾಲ ಅಕ್ರವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದುದು ಪತ್ತೆಯಾಗಿದೆ. ಈ ಬಗ್ಗೆ ಪ್ರೊಬೆಷನರ್ ಡಿವೈಎಸ್ಪಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಇಂತಹ ಹಲವಾರು ಪ್ರಕರಣಗಳು ಪತ್ತೆಯಾಗಿದ್ದರೂ, ಪೊಲೀಸರು ಅವುಗಳ ಬಗ್ಗೆ ಸಮರ್ಪಕ ತನಿಖೆ ನಡೆಸದೆ ಲೋಪವೆಸಗುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…