Categories: ಮಂಡ್ಯ

ಅನುಕಂಪ ಗಿಟ್ಟಿಸುವ ತಂತ್ರಗಳು ಯಾವಾಗಲೂ ಫಲ ಕೊಡುವುದಿಲ್ಲ; ನಿಖಿಲ್ ಕುಮಾರಸ್ವಾಮಿ

ಮಂಡ್ಯ : ಸಂಸದರಾಗಿ ಸುಮಲತಾ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ. ಬೇರೆಯವರನ್ನು ದೂರುವ ಬದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮದ್ದೂರಿನಲ್ಲಿ ಮಾತನಾಡಿದ ನಿಖಿಲ್, ಬೇರೆಯವರನ್ನು ದೂರುವ ಬದಲು ಸಂಸದರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಸದರಾಗಿ ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಪ್ರಶ್ನೆ ಮಾಡಿಕೊಳ್ಳಲಿ. ಮಂಡ್ಯದ ಶಾಸಕರು ಎರಡು ಮೂರು ಬಾರಿ ಆಯ್ಕೆ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯದ ಶಾಸಕರು ಮೂರ್ನಾಲ್ಕು ಬಾರಿ ಆಯ್ಕೆ ಆಗಿದ್ದಾರೆ. ಅಭಿವೃದ್ಧಿ ಆಗಿಲ್ಲ ಅಂದರೆ ಜನರು ಶಾಸಕರನ್ನು ಪ್ರಶ್ನಿಸುತ್ತಾರೆ. 2024ರವರೆಗೂ ಸಂಸದೆ ಸುಮಲತಾ ಅವರಿಗೆ ಅಧಿಕಾರ ಇದೆ. ಜನರ ಜೊತೆ ನಿಂತು ಕೆಲಸ ಮಾಡಲಿ. ಅನುಕಂಪ ಗಿಟ್ಟಿಸುವ ತಂತ್ರಗಳು ಯಾವಾಗಲೂ ಫಲ ಕೊಡುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.

ಅಭಿವೃದ್ಧಿ ಚಟುವಟಿಕೆಗಳಿಗೆ ಹಿನ್ನಡೆಯಾದರೆ ಜನರು ಶಾಸಕರನ್ನು ಹೊಣೆಯಾಗಿಸಿ ಪ್ರಶ್ನಿಸುತ್ತಾರೆ. ಸಂಸದರನ್ನು ಪ್ರಶ್ನಿಸುವುದು ಯಾರು? ಪ್ರತಿಬಾರಿ ಕಾಲು ಕೆರೆದುಕೊಂಡು ಜಗಳ ಹುಟ್ಟುಹಾಕೋದು. ಯಾರೋ ಏನೋ ಹೇಳಿದರು ಎಂದು ದೂರುವ ಮೂಲಕ ಅನುಕಂಪ ಗಿಟ್ಟಿಸಲು ಆಗುವುದಿಲ್ಲ ಎಂದು ವ್ಯಂಗ್ಯವಾಡಿದರು.

Gayathri SG

Recent Posts

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

16 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

32 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

52 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

2 hours ago