ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.ನಡೆದುಕೊಂಡು ಹೋಗುತ್ತಿದ್ದಾಗ ಶರತ್ಗೆ ಕಾರು ಡಿಕ್ಕಿಯಾಗಿತ್ತು.
ವಿದ್ಯಾರ್ಥಿ ಶರತ್ (19) ಸಾವನ್ನಪ್ಪಿದ್ದಾರೆ. ಡಿಸೆಂಬರ್ 23 ರಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದ್ದ ಅಪಘಾತದಲ್ಲಿ ಶರತ್ಗೆ ಗಾಯವಾಗಿತ್ತು.
ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯವಾಗಿತ್ತು. ಮೂವರು ವಿದ್ಯಾರ್ಥಿಗಳ ಪೈಕಿ ಚಿಕಿತ್ಸೆ ಫಲಿಸದೇ ಶರತ್ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿ ಶರತ್ ಅಂಗಾಂಗವನ್ನು ವಿದ್ಯಾರ್ಥಿ ಪೋಷಕರು ದಾನ ಮಾಡಿದ್ದಾರೆ. ಶರತ್ ಹೃದಯ ಆಯಂಬುಲೆನ್ಸ್ನಲ್ಲಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ.