ಮOಡ್ಯ : ಪಡಿತರದಲ್ಲಿ ಬೆಲ್ಲ ನೀಡುವ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ಭರವಸೆ ನೀಡಿದ್ದಾರೆ. ಇದೀಗ ಸಕ್ಕರೆಗಿಂತಲೂ ಬೆಲ್ಲಕ್ಕೆ ಹೆಚ್ಚಿನ ಬೇಡಿಕೆಯಿದ್ದು ಇದರಿಂದ ರೈತರ ಆದಾಯ ದ್ವಿಗುಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು
ಮಂಡ್ಯ ಮತ್ತು ಚಾಮರಾಜನಗರಗಳಲ್ಲಿ ಜನಾಶೀರ್ವಾದ ಯಾತ್ರೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿಕರು ಆಹಾರ ಉತ್ಪಾದನಾ ಘಟಕಗಳನ್ನು ಸ್ಥಾಪನೆ ಮಾಡಬೇಕು. ಬೆಳೆಯಲ್ಲಿ ಹೆಚ್ಚಿನ ಪ್ರಮಾಣದ ಇಳುವರಿ ತೆಗೆಯಲು ಚಿಂತನೆ ಮಾಡಬೇಕು. ಇದರಿಂದ ಆಹಾರ ಪದಾರ್ಥಗಳನ್ನು ವಿದೇಶಗಳಿಗೆ ರಫ್ತು ಮಾಡಿ ಇನ್ನು ಹೆಚ್ಚಿನ ಲಾಭಗಳಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಮಗ್ರ ಕೃಷಿಯಿಂದ ರೈತರು ಲಾಭ ಪಡೆಯಲು ಸಾಧ್ಯ. ಒಂದು ಬೆಳೆ ಕೈ ಕೊಟ್ಟರೆ ಮತ್ತೊಂದರಲ್ಲಿ ಬೆಲೆ ಸಿಗಲಿದೆ. ಅಧ್ಯಯನಗಳ ಪ್ರಕಾರ ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಏಕ ಬೆಲೆ ಆಶ್ರಯಿಸಿದ ರೈತರ ಸಂಖ್ಯೆಯೇ ಹೆಚ್ಚಿದೆ. ವ್ಯವಸಾಯದೊಂದಿಗೆ ಮೀನುಗಾರಿಕೆ, ಕುಕ್ಕುಟೋದ್ಯಮ, ಹೈನುಗಾರಿಕೆ ಕಸುಬುಗಳು ಪೂರಕವಾಗಿದ್ದು ರೈತರು ಇವುಗಳನ್ನು ಅಳವಡಿಸಿಕೊಳ್ಳಬೇಕು ಎಂದರು.