Categories: ಮಂಡ್ಯ

ಕೆ ಆರ್‌ ಎಸ್‌ ಸಮೀಪ ನಿಗೂಢ ಶಬ್ದ

ಮಂಡ್ಯ ; ಇಲ್ಲಿಗೆ ಸಮೀಪದ ಪಾಂಡವಪುರ ತಾಲ್ಲೂಕಿನ ವಿವಿಧೆಡೆ ಗುರುವಾರ ಮಧ್ಯಾಹ್ನ ಕೇಳಿ ಬಂದ ಭಾರಿ ಶಬ್ದದಿಂದ ಭೂಕಂಪನದ ಅನುಭವವಾಗಿ ಜನ ಮನೆಯಿಂದ ಹೊರಗೆ ಓಡಿ ಬಂದರು. ಪಟ್ಟಣ ಸೇರಿದಂತೆ ಚಂದ್ರೆ, ಕೆ.ಬೆಟ್ಟಹಳ್ಳಿ, ಬೇಬಿಬೆಟ್ಟದ ಆಸುಪಾಸಿನ ಹೊನಗಾನಹಳ್ಳಿ, ರಾಗಿ ಮುದ್ದನಹಳ್ಳಿ, ಶಿಂಡ ಭೋಗನಹಳ್ಳಿ, ಚಿನಕುರಳಿ, ಬೆಟ್ಟಹಳ್ಳಿ, ಚಾಗಶೆಟ್ಟಹಳ್ಳಿಯಲ್ಲಿ ಭಾರಿ ಶಬ್ದ ಕೇಳಿ ಬಂತು.
‘ಭಾರಿ ಶಬ್ದದಿಂದಾಗಿ ಮನೆಗಳ ಬಾಗಿಲು, ಕಿಟಕಿ ನಡುಗಿ ದವು. ಪಾತ್ರೆ ಸೇರಿ ಮನೆ ಬಳಕೆ ವಸ್ತುಗಳು ಅಲುಗಾ ಡಿದವು’ ಎಂದು ಗ್ರಾಮಸ್ಥರು ತಿಳಿಸಿದರು.2018ರಲ್ಲೂ ಇದೇ ರೀತಿ ಭಾರಿ ಶಬ್ದ ಕೇಳಿ ಬಂದಿತ್ತು. ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯ ಸ್ಫೋಟದಿಂದ ಶಬ್ದ ಬಂದಿದೆ ಎನ್ನಲಾಗಿತ್ತು. ರಾಜ್ಯ ನೈಸರ್ಗಿಕ ವಿಕೋಪ ಮತ್ತು ಉಸ್ತು ವಾರಿ ಸಂಸ್ಥೆ ಪರಿಶೀಲನೆ ನಡೆಸಿತ್ತು. ‘ಈಗಲೂ ಕಲ್ಲು ಗಣಿ ಸ್ಫೋಟದಿಂದಲೇ ಶಬ್ದ ಬಂದಿದೆ’ ಎಂದು ಸಾರ್ವಜನಿಕರು ಶಂಕಿಸಿದ್ದಾರೆ. ‘ಗಣಿಗಾರಿಕೆ ಸ್ಥಗಿತಗೊಂಡಿರುವುದರಿಂದ ಕಲ್ಲು ಸ್ಫೋಟ ನಡೆಯುತ್ತಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Indresh KC

Recent Posts

ನಾನೆಲ್ಲೂ ಓಡಿ ಹೋಗಿಲ್ಲ, ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ: ಎಚ್.ಡಿ. ರೇವಣ್ಣ

ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ…

1 min ago

ಶೈಕ್ಷಣಿಕ ಸಾಧನೆಗಿಂತ ನನ್ನ ಮೀಸೆಯಿಂದಾಗಿ ಹೆಚ್ಚು ಟ್ರೋಲ್‌ ಆಗಿದ್ದೇನೆ : ಟಾಪರ್‌ ಹುಡುಗಿ

98.50 ಪ್ರತಿಶತ ಅಂಕದೊಂದಿಗೆ ಯುಪಿ ಬೋರ್ಡ್ 10ನೇ ತರಗತಿಯ ಟಾಪರ್ ಆಗಿ ಹೊರಹೊಮ್ಮಿರುವ ಪ್ರಾಚಿ ನಿಗಮ್ ತಮ್ಮ ಮುಖದ ಕೂದಲಿನ…

19 mins ago

ತಂದೆ ಮುಖಕ್ಕೆ ಮನ ಬಂದಂತೆ ಹೊಡೆದು ಕೊಂದೆ ಬಿಟ್ಟ ಕ್ರೂರಿ ಮಗ

ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ…

47 mins ago

ಮಸೀದಿ ಒಳಗೆ ನುಗ್ಗಿ ಮಕ್ಕಳ ಮುಂದೆ ದೊಣ್ಣೆಗಳಿಂದ ಹೊಡೆದು ಧರ್ಮಗುರುವಿನ ಕೊಲೆ

ಅಕ್ರಮವಾಗಿ ಮಸೀದಿ ಒಳಗೆ ನುಗ್ಗಿದ ಮೂವರು ಮಾಸ್ಕ್​ ಧರಿಸಿದ ದುಷ್ಕರ್ಮಿಗಳು ಅಮಾನುಷವಾಗಿ ದೊಣ್ಣೆಗಳಿಂದ ಹೊಡೆದು ಧರ್ಮಗುರುವನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.…

1 hour ago

ನಾಮಪತ್ರ ಹಿಂಪಡೆದ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್​ ಕಾಂತಿ ಬಾಮ್​

ಚುನಾವಣೆಗೂ ಮುನ್ನ ಇಂದೋರ್​ನ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್​ ಕಾಂತಿ ಬಾಮ್​ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.

1 hour ago

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್…

1 hour ago