ಮಂಡ್ಯ : ಫೆ.7 ರಂದು ರೈಸ್ ಫುಲ್ಲಿಂಗ್ ವಿಚಾರವಾಗಿ ಕೊಳ್ಳೆಗಾಲದ ಸಲೀಂ ಎಂಬಾತನ ಹತ್ಯೆಯಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕನ ಮಗನನ್ನು ಬಂಧಿಸಲಾಗಿದೆ.
ದುಷ್ಕರ್ಮಿಗಳ ಗುಂಪೊಂದು 40 ವರ್ಷದ ಸಲೀಂ ನನ್ನು ಕೊಲೆ ಮಾಡಿತ್ತು. ಆ ಬಳಿಕ ಆ ಮೃತದೇಹವನ್ನು ಮಳವಳ್ಳಿಯ ಪಡಂತಹಳ್ಳಿಯ ರಸ್ತೆ ಬದಿ ಎಸೆದು ಹೋಗಿತ್ತು. ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಹುನ್ನಾರ ನಡೆಸಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿತ್ತು.
ಸಲೀಂನನ್ನು ಕೊಲೆ ಮಾಡಿದ್ದ ತಂಡ ಎಡವಟ್ಟಿನಿಂದ ಪ್ರಕರಣ ಬಯಲಿಗೆ ಬಂದಿದೆ. ಕೊಲೆ ಮಾಡಿದ್ದ ಶವವನ್ನು ಬೆಳಕವಾಡಿ ಠಾಣೆ ವ್ಯಾಪ್ತಿ ಬದಲಿಗೆ ಮಳವಳ್ಳಿ ಗ್ರಾಮಾಂತರ ಪರದಿಯಲ್ಲಿ ಶವವನ್ನು ಬಿಸಾಡಿದ್ದರಿಂದ ಪ್ರಕರಣ ಬಯಲಿಗೆ ಬಂದಿದೆ.
ಪ್ರಕರಣದ ತನಿಖೆಯನ್ನು ನಡೆಸಿದ ಮಳವಳ್ಳಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ರಾಜೇಶ್ ಹಾಗೂ ತಂಡ, ಸೂಕ್ಷ್ಮವಾಗಿ ತನಿಖೆ ನಡೆಸಿ ಇದೀಗ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಪುತ್ರ ಶ್ರೀಕಾಂತ್ ನನ್ನು ಬಂಧಿಸಿದ್ದಾರೆ.