News Karnataka Kannada
Tuesday, April 30 2024
ಮಂಡ್ಯ

ಕೊಲೆ ಪ್ರಕರಣ: ಮಾಜಿ ಶಾಸಕನ ಪುತ್ರ ಅರೆಸ್ಟ್‌!

Photo Credit : IANS

ಮಂಡ್ಯ : ಫೆ.7 ರಂದು ರೈಸ್ ಫುಲ್ಲಿಂಗ್ ವಿಚಾರವಾಗಿ ಕೊಳ್ಳೆಗಾಲದ ಸಲೀಂ ಎಂಬಾತನ ಹತ್ಯೆಯಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕನ ಮಗನನ್ನು ಬಂಧಿಸಲಾಗಿದೆ.

ದುಷ್ಕರ್ಮಿಗಳ ಗುಂಪೊಂದು 40 ವರ್ಷದ ಸಲೀಂ ನನ್ನು ಕೊಲೆ ಮಾಡಿತ್ತು. ಆ ಬಳಿಕ ಆ ಮೃತದೇಹವನ್ನು ಮಳವಳ್ಳಿಯ ಪಡಂತಹಳ್ಳಿಯ ರಸ್ತೆ ಬದಿ ಎಸೆದು ಹೋಗಿತ್ತು. ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಹುನ್ನಾರ ನಡೆಸಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿತ್ತು.

ಸಲೀಂನನ್ನು ಕೊಲೆ ಮಾಡಿದ್ದ ತಂಡ ಎಡವಟ್ಟಿನಿಂದ ಪ್ರಕರಣ ಬಯಲಿಗೆ ಬಂದಿದೆ. ಕೊಲೆ ಮಾಡಿದ್ದ ಶವವನ್ನು ಬೆಳಕವಾಡಿ ಠಾಣೆ ವ್ಯಾಪ್ತಿ ಬದಲಿಗೆ ಮಳವಳ್ಳಿ ಗ್ರಾಮಾಂತರ ಪರದಿಯಲ್ಲಿ ಶವವನ್ನು ಬಿಸಾಡಿದ್ದರಿಂದ ಪ್ರಕರಣ ಬಯಲಿಗೆ ಬಂದಿದೆ.

ಪ್ರಕರಣದ ತನಿಖೆಯನ್ನು ನಡೆಸಿದ ಮಳವಳ್ಳಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ರಾಜೇಶ್ ಹಾಗೂ ತಂಡ, ಸೂಕ್ಷ್ಮವಾಗಿ ತನಿಖೆ ನಡೆಸಿ ಇದೀಗ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಪುತ್ರ ಶ್ರೀಕಾಂತ್ ನನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು