News Karnataka Kannada
Friday, May 03 2024
ಮಂಡ್ಯ

ಗೋಪೂಜೆ ಮಾಡಿ ಅಶ್ವಥ್‌ನಾರಾಯಣ್ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಮುಖಂಡರು

Birthday Celebration
Photo Credit : News Kannada

ಪಾಂಡವಪುರ : ಉನ್ನತ ಶಿಕ್ಷಣ ಸಚಿವ ಡಾ.ಸಿ.ನ್.ಅಶ್ವಥ್‌ನಾರಾಯಣ್ ಅವರ ಹುಟ್ಟುಹಬ್ಬ ಪ್ರಯುಕ್ತ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ತಾಲೂಕಿನ ದೊಡ್ಡಬ್ಯಾಡರಹಳ್ಳಿಯ ಚೈತ್ರಾ ಗೋ ಶಾಲೆಯ ಗೋವುಗಳಿಗೆ ಹಣ್ಣು, ಬೆಲ್ಲ ನೀಡಿ ಪೂಜೆ ಸಲ್ಲಿಸಿದರು.

ಇದೇ ವೇಳೆ ಕಿಯೋನಿಕ್ಸ್ ನಿರ್ದೇಶಕ ಎಚ್.ಎನ್.ಮಂಜುನಾಥ್ ಮಾತನಾಡಿ, ಇಂದಿನ ದಿನಗಳಲ್ಲಿ ಕೇವಲ ಒಂದೆರಡು ಹಸುಗಳನ್ನು ಸಾಕುವುದೇ ಕಷ್ಟಕರವಾಗಿದೆ. ಆದರೆ ಚೈತ್ರಾ ಗೋಶಾಲೆಯವರು ಟ್ರಸ್ಟ್ ಸ್ಥಾಪನೆ ಮಾಡಿಕೊಂಡು ಸುಮಾರು 800ಕ್ಕೂ ಹೆಚ್ಚು ಗೋವುಗಳನ್ನು ಸಾಕುತ್ತಿರುವುದು ನಿಜಕ್ಕೂ ಮೆಚ್ಚಲೇಬೇಕಾದ ವಿಚಾರ. ಇವುಗಳನ್ನು ವ್ಯವಸ್ಥಿತವಾಗಿ ನೋಡಿಕೊಳ್ಳಲು 40 ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಕಟುಕರ ಕೈಗೆ ಸಿಲುಕಿದ ಕಸಾಯಿಖಾನೆಗೆ ರವಾನೆಯಾಗುವ ಗೋವುಗಳನ್ನು ರಕ್ಷಿಸಿ, ಅವುಗಳನ್ನು ಪ್ರೀತಿಯಿಂದ ಸಾಕುವ ಕೆಲಸ ಮಾಡಲಾಗುತ್ತಿದೆ. ಇಷ್ಟು ದೊಡ್ಡ ಸಂಖ್ಯೆಯ ಗೋವುಗಳನ್ನು ಸಾಕುವುದು ಸುಲಭದ ಮಾತಲ್ಲ. ಸಾಕಷ್ಟು ಹಣದ ಅವಶ್ಯಕತೆ ಇರುತ್ತದೆ. ಹೀಗಾಗಿ ಬಿಜೆಪಿ ಶಾಸಕರು ಮತ್ತು ಸಂಸದರಿಂದ ಚೈತ್ರ ಗೋಶಾಲೆಗೆ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಈ ವೇಳೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್, ಮೈಶುಗರ್ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಪುರಸಭೆ ಸದಸ್ಯ ಶ್ರೀನಿವಾಸನಾಯಕ, ಮಂಡ್ಯ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರಾಧ್ಯ, ಮುಖಂಡರಾದ ಮಲ್ಲಿಕಾರ್ಜುನ್, ಡಾ.ಸದಾನಂದ, ಅರಳಕುಪ್ಪೆ ಪರಶಿವಮೂರ್ತಿ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು