ಪಾಂಡವಪುರ : ಉನ್ನತ ಶಿಕ್ಷಣ ಸಚಿವ ಡಾ.ಸಿ.ನ್.ಅಶ್ವಥ್ನಾರಾಯಣ್ ಅವರ ಹುಟ್ಟುಹಬ್ಬ ಪ್ರಯುಕ್ತ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ತಾಲೂಕಿನ ದೊಡ್ಡಬ್ಯಾಡರಹಳ್ಳಿಯ ಚೈತ್ರಾ ಗೋ ಶಾಲೆಯ ಗೋವುಗಳಿಗೆ ಹಣ್ಣು, ಬೆಲ್ಲ ನೀಡಿ ಪೂಜೆ ಸಲ್ಲಿಸಿದರು.
ಇದೇ ವೇಳೆ ಕಿಯೋನಿಕ್ಸ್ ನಿರ್ದೇಶಕ ಎಚ್.ಎನ್.ಮಂಜುನಾಥ್ ಮಾತನಾಡಿ, ಇಂದಿನ ದಿನಗಳಲ್ಲಿ ಕೇವಲ ಒಂದೆರಡು ಹಸುಗಳನ್ನು ಸಾಕುವುದೇ ಕಷ್ಟಕರವಾಗಿದೆ. ಆದರೆ ಚೈತ್ರಾ ಗೋಶಾಲೆಯವರು ಟ್ರಸ್ಟ್ ಸ್ಥಾಪನೆ ಮಾಡಿಕೊಂಡು ಸುಮಾರು 800ಕ್ಕೂ ಹೆಚ್ಚು ಗೋವುಗಳನ್ನು ಸಾಕುತ್ತಿರುವುದು ನಿಜಕ್ಕೂ ಮೆಚ್ಚಲೇಬೇಕಾದ ವಿಚಾರ. ಇವುಗಳನ್ನು ವ್ಯವಸ್ಥಿತವಾಗಿ ನೋಡಿಕೊಳ್ಳಲು 40 ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಕಟುಕರ ಕೈಗೆ ಸಿಲುಕಿದ ಕಸಾಯಿಖಾನೆಗೆ ರವಾನೆಯಾಗುವ ಗೋವುಗಳನ್ನು ರಕ್ಷಿಸಿ, ಅವುಗಳನ್ನು ಪ್ರೀತಿಯಿಂದ ಸಾಕುವ ಕೆಲಸ ಮಾಡಲಾಗುತ್ತಿದೆ. ಇಷ್ಟು ದೊಡ್ಡ ಸಂಖ್ಯೆಯ ಗೋವುಗಳನ್ನು ಸಾಕುವುದು ಸುಲಭದ ಮಾತಲ್ಲ. ಸಾಕಷ್ಟು ಹಣದ ಅವಶ್ಯಕತೆ ಇರುತ್ತದೆ. ಹೀಗಾಗಿ ಬಿಜೆಪಿ ಶಾಸಕರು ಮತ್ತು ಸಂಸದರಿಂದ ಚೈತ್ರ ಗೋಶಾಲೆಗೆ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಈ ವೇಳೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್, ಮೈಶುಗರ್ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಪುರಸಭೆ ಸದಸ್ಯ ಶ್ರೀನಿವಾಸನಾಯಕ, ಮಂಡ್ಯ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರಾಧ್ಯ, ಮುಖಂಡರಾದ ಮಲ್ಲಿಕಾರ್ಜುನ್, ಡಾ.ಸದಾನಂದ, ಅರಳಕುಪ್ಪೆ ಪರಶಿವಮೂರ್ತಿ ಇತರರು ಇದ್ದರು.